ವಿಧಾನಸಭೆಯಲ್ಲಿ ಕಾಂಗ್ರೆಸ್ನ ಸುಬ್ಬಾರೆಡ್ಡಿ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅಶೋಕ, ಪ್ರಸ್ತುತ ಭೂಮಾಪನ ಇಲಾಖೆಯಲ್ಲಿ ಹಿಸ್ಸಾ ಡಿಜಿಟೈಸೇಷನ್ ಕಾರ್ಯ ಪ್ರಗತಿಯಲ್ಲಿದ್ದು, ಪ್ರಾಯೋಗಿಕವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಮತ್ತು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕುಗಳ ಎಲ್ಲಾ ಗ್ರಾಮಗಳ ಸರ್ವೆ ನಂಬರ್ಗಳಲ್ಲಿನ ಹಿಸ್ಸಾ ಡಿಜಿಟೈಸೇಷನ್ ಕಾರ್ಯಪೂರ್ಣಗೊಂಡಿದೆ. ಅವುಗಳನ್ನು ದಿಶಾಂಕ್ ಆ್ಯಪ್ನಲ್ಲಿ ಅಳವಡಿಸಲಾಗಿದೆ ಎಂದು ಹೇಳಿದ್ದಾರೆ.