‘ಜಾನಪದ, ವೃತ್ತಿ ಮತ್ತು ಹವ್ಯಾಸ ರಂಗಭೂಮಿಯಿಂದ ಕಳೆದ ವರ್ಷ 6 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿತ್ತು. ಅಕಾಡೆಮಿಗಳ ಅಧ್ಯಕ್ಷರ ಜತೆಗೆ ವಿಷಯ ತಜ್ಞರು ಕೂಡ ಇದ್ದಲ್ಲಿ ಉತ್ತಮ ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಆದರೆ, ಈ ಬಾರಿ ರಂಗಭೂಮಿ ಕ್ಷೇತ್ರದಿಂದ ವಿಷಯ ತಜ್ಞರು ಇಲ್ಲದಿರುವುದು ಬೇಸರವನ್ನುಂಟು ಮಾಡಿದೆ’ ಎಂದು ಕರ್ನಾಟಕ ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಜೆ. ಲೋಕೇಶ್ ತಿಳಿಸಿದರು.