<p><strong>ತಿಪಟೂರು:</strong> ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ ಪದಾರ್ಥ ಹುಳು ಹಿಡಿದಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಯೊಬ್ಬಳು, ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ.</p>.<p>ತಾಲ್ಲೂಕಿನ ಹೊನ್ನವಳ್ಳಿಯ ಕೆಪಿಎಸ್ ಶಾಲೆಯಲ್ಲಿ ಎರಡು ದಿನಗಳ ಹಿಂದೆ ಆಹಾರ ಪದಾರ್ಥ ವಿತರಣೆ ಮಾಡಿದ್ದರು. ಇದು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.</p>.<p>‘ಫ್ರೆಂಡ್ಸ್ ಇಂತಹ ಹಾಳಾದ ಅಕ್ಕಿ ಮತ್ತು ಬೇಳೆಯನ್ನು ಶಾಲೆಯಿಂದ ನೀಡಿದ್ದಾರೆ. ಇಂತಹ ಬೇಳೆ ತಿನ್ನಲು ಸಾಧ್ಯವೇ ಎಂದು ಕೇಳಿದರೆ ದನಕ್ಕೆ ಹಾಕಿ ಎಂದು ಹೇಳುತ್ತಾರೆ. ನಾವೇನು ಮಾಡಬೇಕು’ ಎಂದು ವಿದ್ಯಾರ್ಥಿನಿ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>‘ಮೂರು ತಿಂಗಳ ಹಿಂದೆ ವಿತರಣೆ ಮಾಡಿದ್ದ ಅಕ್ಕಿ ಹಾಗೂ ಮೂರು ಕ್ವಿಂಟಲ್ ಬೇಳೆ ಉಳಿದಿದ್ದು, ಇದೀಗ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ’ ಎಂದು ಶಿಕ್ಷಕರು ತಿಳಿಸಿದ್ದಾರೆ.</p>.<p>ವಿಡಿಯೊ ವೈರಲ್ ಆದ ಬಳಿಕ ಬಿಸಿಯೂಟದ ಅಡುಗೆ ಸಿಬ್ಬಂದಿ ಮೂಲಕ ಆಹಾರ ಪದಾರ್ಥವನ್ನು ಸ್ವಚ್ಛಗೊಳಿಸಿ, ವಿದ್ಯಾರ್ಥಿಗಳಿಗೆ ನೀಡಲು ಶಿಕ್ಷಕರು ಮುಂದಾಗಿದ್ದಾರೆ.</p>.<p>***</p>.<p>ಅಧಿಕಾರಿಗಳು ಉಳಿದಿರುವ ಕಾಳುಗಳನ್ನು ವಿತರಿಸುವಂತೆ ಮೌಖಿಕವಾಗಿ ತಿಳಿಸಿದ್ದರು. ಬೇಳೆಗಳಿಗೆ ಸಾಮಾನ್ಯ ಹುಳುಗಳಾಗಿದ್ದು, ಸ್ವಚ್ಛ ಮಾಡಿ ವಿತರಿಸಲಾಗುವುದು</p>.<p><strong>- ಮುಖ್ಯಶಿಕ್ಷಕಿ, ಕೆ.ಪಿ.ಎಸ್. ಹೊನ್ನವಳ್ಳಿ ಶಾಲೆ</strong></p>.<p>***</p>.<p>ಅಕ್ಷರ ದಾಸೋಹದ ಅಡಿ 3 ತಿಂಗಳಿನಿಂದ ಯಾವುದೇ ಆಹಾರ ಪದಾರ್ಥ ವಿತರಿಸಿಲ್ಲ. ಈ ಬಗ್ಗೆ ಶಾಲೆ ಮುಖ್ಯಸ್ಥರಿಂದ ವಿವರಣೆ ಕೇಳಲಾಗುವುದು</p>.<p><strong>- ಪ್ರಕಾಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ ಪದಾರ್ಥ ಹುಳು ಹಿಡಿದಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಯೊಬ್ಬಳು, ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ.</p>.<p>ತಾಲ್ಲೂಕಿನ ಹೊನ್ನವಳ್ಳಿಯ ಕೆಪಿಎಸ್ ಶಾಲೆಯಲ್ಲಿ ಎರಡು ದಿನಗಳ ಹಿಂದೆ ಆಹಾರ ಪದಾರ್ಥ ವಿತರಣೆ ಮಾಡಿದ್ದರು. ಇದು ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.</p>.<p>‘ಫ್ರೆಂಡ್ಸ್ ಇಂತಹ ಹಾಳಾದ ಅಕ್ಕಿ ಮತ್ತು ಬೇಳೆಯನ್ನು ಶಾಲೆಯಿಂದ ನೀಡಿದ್ದಾರೆ. ಇಂತಹ ಬೇಳೆ ತಿನ್ನಲು ಸಾಧ್ಯವೇ ಎಂದು ಕೇಳಿದರೆ ದನಕ್ಕೆ ಹಾಕಿ ಎಂದು ಹೇಳುತ್ತಾರೆ. ನಾವೇನು ಮಾಡಬೇಕು’ ಎಂದು ವಿದ್ಯಾರ್ಥಿನಿ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>‘ಮೂರು ತಿಂಗಳ ಹಿಂದೆ ವಿತರಣೆ ಮಾಡಿದ್ದ ಅಕ್ಕಿ ಹಾಗೂ ಮೂರು ಕ್ವಿಂಟಲ್ ಬೇಳೆ ಉಳಿದಿದ್ದು, ಇದೀಗ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ’ ಎಂದು ಶಿಕ್ಷಕರು ತಿಳಿಸಿದ್ದಾರೆ.</p>.<p>ವಿಡಿಯೊ ವೈರಲ್ ಆದ ಬಳಿಕ ಬಿಸಿಯೂಟದ ಅಡುಗೆ ಸಿಬ್ಬಂದಿ ಮೂಲಕ ಆಹಾರ ಪದಾರ್ಥವನ್ನು ಸ್ವಚ್ಛಗೊಳಿಸಿ, ವಿದ್ಯಾರ್ಥಿಗಳಿಗೆ ನೀಡಲು ಶಿಕ್ಷಕರು ಮುಂದಾಗಿದ್ದಾರೆ.</p>.<p>***</p>.<p>ಅಧಿಕಾರಿಗಳು ಉಳಿದಿರುವ ಕಾಳುಗಳನ್ನು ವಿತರಿಸುವಂತೆ ಮೌಖಿಕವಾಗಿ ತಿಳಿಸಿದ್ದರು. ಬೇಳೆಗಳಿಗೆ ಸಾಮಾನ್ಯ ಹುಳುಗಳಾಗಿದ್ದು, ಸ್ವಚ್ಛ ಮಾಡಿ ವಿತರಿಸಲಾಗುವುದು</p>.<p><strong>- ಮುಖ್ಯಶಿಕ್ಷಕಿ, ಕೆ.ಪಿ.ಎಸ್. ಹೊನ್ನವಳ್ಳಿ ಶಾಲೆ</strong></p>.<p>***</p>.<p>ಅಕ್ಷರ ದಾಸೋಹದ ಅಡಿ 3 ತಿಂಗಳಿನಿಂದ ಯಾವುದೇ ಆಹಾರ ಪದಾರ್ಥ ವಿತರಿಸಿಲ್ಲ. ಈ ಬಗ್ಗೆ ಶಾಲೆ ಮುಖ್ಯಸ್ಥರಿಂದ ವಿವರಣೆ ಕೇಳಲಾಗುವುದು</p>.<p><strong>- ಪ್ರಕಾಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>