ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಬಾರದು. ಪರವಾನಗಿಗೆ ಅರ್ಜಿ ಸಲ್ಲಿಸಿದ ಬಳಿಕ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ ಅನುಮತಿ ನೀಡಬಹುದು. ಅಕ್ರಮ ಕಂಡುಬಂದರೆ ಅಧಿಕಾರಿಗ ಳನ್ನೇ ಹೊಣೆ ಮಾಡಲಾಗುವುದು. ಸಾಂಪ್ರದಾಯಿಕವಾಗಿ ಕಲ್ಲುಗಳನ್ನು ಒಡೆದು ಜಲ್ಲಿ ಮಾಡುವವರನ್ನು ಪ್ರೋತ್ಸಾಹಿಸಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿಯ ಕೊರತೆಯಾಗದಂತೆ ನೋಡಿ ಕೊಳ್ಳಬೇಕು ಎಂದರು.