<p><strong>ಬೆಂಗಳೂರು:</strong> ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದಿದ್ದ ಗಲಭೆ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಚೇರಿಗಳ ಮೇಲೆ ಮಂಗಳವಾರ ದಾಳಿ ಮಾಡಿದರು.</p>.<p>ಗಲಭೆಯಲ್ಲಿ ಭಾಗಿಯಾಗಿದ್ದ ಹಾಗೂ ಪ್ರಚೋದನೆ ನೀಡಿದ್ದ ಆರೋಪದಡಿ ಎಸ್ಡಿಪಿಐ ಪಕ್ಷದ ಹಲವರನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದರು. ಅವರು ನೀಡಿದ ಮಾಹಿತಿ ಮೇರೆಗೆ ಪಕ್ಷದ ಕಚೇರಿಗಳ ಮೇಲೆ ದಾಳಿ ಮಾಡಿ ತಪಾಸಣೆ ಮಾಡಲಾಗಿದೆ.</p>.<p>‘ನ್ಯಾಯಾಲಯದ ಅನುಮತಿ ಪಡೆದು ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಹಲಸೂರ್ ಗೇಟ್ ಬಳಿ ಇರುವ ಎಸ್ಡಿಪಿಐ ಕಚೇರಿಗಳ ಮೇಲೆ ಮೂರು ವಿಶೇಷ ತಂಡಗಳು ದಾಳಿ ಮಾಡಿವೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<p>ಲ್ಯಾಪ್ಟಾಪ್ ಜಪ್ತಿ; ಸಿಸಿಬಿ ದಾಳಿ ಮಾಡಿದ ವೇಳೆ ಎಸ್ಡಿಪಿಐ ಕಚೇರಿಯಲ್ಲಿ ಲ್ಯಾಪ್ಟಾಪ್ಗಳು ಹಾಗೂ ಭಿತ್ತಿ ಪತ್ರಗಳು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.</p>.<p>‘ಕರಪತ್ರಗಳು, ಕಾನೂನು ಪುಸ್ತಕಗಳು, ಸಿಎಎ ಹಾಗೂ ಎನ್ಆರ್ಸಿ ಕುರಿತ ಬ್ಯಾನರ್ ಮತ್ತು ಕಿರುಚಿತ್ರದ ಸಿ.ಡಿ, ಘೋಷಣಾ ಫಲಕಗಳು ಕಚೇರಿಯಲ್ಲಿದ್ದವು. ಎರಡು ಲ್ಯಾಪ್ಟಾಪ್ಗಳನ್ನು ಜಪ್ತಿ ಮಾಡಲಾಗಿದ್ದು, ಅವುಗಳ ಪರೀಕ್ಷೆಗಾಗಿ ತಾಂತ್ರಿಕ ವಿಭಾಗಕ್ಕೆ ನೀಡಲಾಗಿದೆ’ ಎಂದೂ ಸಿಸಿಬಿ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದಿದ್ದ ಗಲಭೆ ಸಂಬಂಧ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಚೇರಿಗಳ ಮೇಲೆ ಮಂಗಳವಾರ ದಾಳಿ ಮಾಡಿದರು.</p>.<p>ಗಲಭೆಯಲ್ಲಿ ಭಾಗಿಯಾಗಿದ್ದ ಹಾಗೂ ಪ್ರಚೋದನೆ ನೀಡಿದ್ದ ಆರೋಪದಡಿ ಎಸ್ಡಿಪಿಐ ಪಕ್ಷದ ಹಲವರನ್ನು ಈ ಹಿಂದೆಯೇ ಪೊಲೀಸರು ಬಂಧಿಸಿದ್ದರು. ಅವರು ನೀಡಿದ ಮಾಹಿತಿ ಮೇರೆಗೆ ಪಕ್ಷದ ಕಚೇರಿಗಳ ಮೇಲೆ ದಾಳಿ ಮಾಡಿ ತಪಾಸಣೆ ಮಾಡಲಾಗಿದೆ.</p>.<p>‘ನ್ಯಾಯಾಲಯದ ಅನುಮತಿ ಪಡೆದು ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಹಾಗೂ ಹಲಸೂರ್ ಗೇಟ್ ಬಳಿ ಇರುವ ಎಸ್ಡಿಪಿಐ ಕಚೇರಿಗಳ ಮೇಲೆ ಮೂರು ವಿಶೇಷ ತಂಡಗಳು ದಾಳಿ ಮಾಡಿವೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<p>ಲ್ಯಾಪ್ಟಾಪ್ ಜಪ್ತಿ; ಸಿಸಿಬಿ ದಾಳಿ ಮಾಡಿದ ವೇಳೆ ಎಸ್ಡಿಪಿಐ ಕಚೇರಿಯಲ್ಲಿ ಲ್ಯಾಪ್ಟಾಪ್ಗಳು ಹಾಗೂ ಭಿತ್ತಿ ಪತ್ರಗಳು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.</p>.<p>‘ಕರಪತ್ರಗಳು, ಕಾನೂನು ಪುಸ್ತಕಗಳು, ಸಿಎಎ ಹಾಗೂ ಎನ್ಆರ್ಸಿ ಕುರಿತ ಬ್ಯಾನರ್ ಮತ್ತು ಕಿರುಚಿತ್ರದ ಸಿ.ಡಿ, ಘೋಷಣಾ ಫಲಕಗಳು ಕಚೇರಿಯಲ್ಲಿದ್ದವು. ಎರಡು ಲ್ಯಾಪ್ಟಾಪ್ಗಳನ್ನು ಜಪ್ತಿ ಮಾಡಲಾಗಿದ್ದು, ಅವುಗಳ ಪರೀಕ್ಷೆಗಾಗಿ ತಾಂತ್ರಿಕ ವಿಭಾಗಕ್ಕೆ ನೀಡಲಾಗಿದೆ’ ಎಂದೂ ಸಿಸಿಬಿ ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>