ಸರ್ಕಾರ ನೀಡಿರುವ ಸಹಾಯವಾಣಿಯಿಂದ ಕೋವಿಡ್ ರೋಗಿಗಳಿಗೆ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಕೆಪಿಸಿಸಿಯಿಂದ ಸಹಾಯವಾಣಿ ಆರಂಭಿಸಿದ್ದು, 10 ಆಂಬುಲೆನ್ಸ್ಗಳನ್ನು ಒದಗಿಸಲಾಗಿದೆ. ಈವರೆಗೆ 100ಕ್ಕೂ ಹೆಚ್ಚು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 300 ಜನರಿಗೆ ವೈದ್ಯರ ಮೂಲಕ ಮಾರ್ಗದರ್ಶನ ಕೊಡಿಸಿ, ಔಷಧಿ ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.