ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ. ಶಿವಕುಮಾರ್‌ ಪ್ರಚಾರಕರ ಮೇಲೂ ಐ.ಟಿ ದಾಳಿ

Last Updated 12 ಅಕ್ಟೋಬರ್ 2021, 15:26 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ರಾಜಕಾರಣಿಗಳಿಗೆ ಚುನಾವಣಾ ಪ್ರಚಾರ, ಸಾಮಾಜಿಕ ಮಾಧ್ಯಮಗಳ ನಿರ್ವಹಣೆ, ರಾಜಕೀಯ ಪ್ರಚಾರದ ಸೇವೆ ಒದಗಿಸುತ್ತಿರುವ ‘ಡಿಸೈನ್‌ ಬಾಕ್ಸ್ಡ್‌’ ಎಂಬ ಕಂಪನಿಯ ಕಚೇರಿ ಮೇಲೆ ಮಂಗಳವಾರ ದಾಳಿ ಮಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಶೋಧ ನಡೆಸಿದ್ದಾರೆ.

ಬಳ್ಳಾರಿ ರಸ್ತೆಯಲ್ಲಿ ಕಚೇರಿ ಹೊಂದಿರುವ ಈ ಕಂಪನಿ, ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ಹಲವು ಮುಖಂಡರಿಗೆ ಸೇವೆ ಒದಗಿಸುತ್ತಿದೆ. ಪಂಜಾಬ್‌ ಪ್ರದೇಶ ಕಾಂಗ್ರೆಸ್‌ ಸಮಿತಿಗೂ ಸೇವೆ ನೀಡುತ್ತಿದೆ. ಬಳ್ಳಾರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಹಲವು ಗಂಟೆಗಳ ಕಾಲ ಶೋಧ ನಡೆಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

ದಾಳಿ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್‌, ‘ಈ ಕಂಪನಿಗೆ ಹಿಂದೆ ನನಗೆ ಸೇವೆ ಒದಗಿಸುತ್ತಿತ್ತು. ಆದರೆ, ನನ್ನ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ನಿರ್ವಹಣೆ ಮಾಡುತ್ತಿರಲಿಲ್ಲ. ಐ.ಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಕಂಪನಿ ಪ್ರತಿನಿಧಿಗಳು ಉತ್ತರಿಸುತ್ತಾರೆ. ಶೋಧದಲ್ಲಿ ಏನು ಪತ್ತೆಯಾಗುತ್ತದೆ ನೋಡೋಣ. ಆಮೇಲೆ ನಾನು ಮಾತನಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT