ತಮ್ಮ ಅಧಿಕೃತ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಶುಕ್ರವಾರ ಉಪಾಹಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಕ್ಷದ ನಾಯಕರೇ ಹುಟ್ಟುಹಬ್ಬ ಆಚರಣೆ ಸಮಿತಿಯಲ್ಲಿದ್ದಾರೆ. ಕಾಂಗ್ರೆಸ್ ನಾಯಕರ ಹೊರತಾಗಿ ಯಾರಿಗೂ ಆಹ್ವಾನ ನೀಡಿಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ ಸೇರಿದಂತೆ ಪಕ್ಷದ ನಾಯಕರಿಗೇ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆʼ ಎಂದರು.