ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ನಡುವಿನ ವಾಕ್ಸಮರದ ಕುರಿತು ಸುದ್ದಿಗಾರರ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಅವರು, ‘ಅಣೆಕಟ್ಟೆಯಲ್ಲಿ ಬಿರುಕು ಉಂಟಾಗಿದೆ ಎಂದು ಹೇಳಿ ಜನರಲ್ಲಿ ಆತಂಕ ಮೂಡಿಸುವುದು ನಮ್ಮ ಕೆಲಸವಲ್ಲ. ವಿರೋಧ ಪಕ್ಷವಾಗಿ, ಸರ್ಕಾರಕ್ಕೆ ಸಲಹೆ ನೀಡುವುದು, ಕೆಲಸ ಮಾಡದಿದ್ದಾಗ ಟೀಕಿಸುವುದು ನಮ್ಮ ಕೆಲಸ. ಜನರಲ್ಲಿ ಭಯ ಹುಟ್ಟಿಸುವ ಕೆಲಸಗಳಲ್ಲಿ ಎಂದಿಗೂ ಕಾಂಗ್ರೆಸ್ ಪಕ್ಷ ಭಾಗಿಯಾಗದು’ ಎಂದರು.