‘ಸುಪ್ರೀಂಕೋರ್ಟ್ ಒಪ್ಪಿಗೆ ಸಿಕ್ಕಿದ ತಕ್ಷಣ ಮೇಕೆದಾಟು ಯೋಜನೆ ಆರಂಭಿಸಲು ಒಂದು ಕ್ಷಣ ಕೂಡಾ ವಿಳಂಬ ಮಾಡುವುದಿಲ್ಲ. ನಿಜಲಿಂಗಪ್ಪ ಅವರ ಕಾಲದಲ್ಲಿ ಆರಂಭಿಸಿದ ಯೋಜನೆ ಇಲ್ಲಿಯವರೆಗೆ ಏಕೆ ಬಂತು ಎಂಬುದಕ್ಕೆ ಶಿವಕುಮಾರ್ ಉತ್ತರ ನೀಡಬೇಕು. ಕಾಂಗ್ರೆಸ್ ನಿರ್ಲಕ್ಷ್ಯದಿಂದಾಗಿ ಮೇಕೆದಾಟು ಯೋಜನೆ ₹5ಸಾವಿರ ಕೋಟಿಯಿಂದ ₹10 ಸಾವಿರ ಕೋಟಿಗೆ ಏರಿಕೆ ಆಗಿದೆ. ಕಾಂಗ್ರೆಸ್ ನಾಟಕವನ್ನು ಜನ ನೋಡಿದ್ದಾರೆ. ಈ ಯೋಜನೆಯನ್ನು ಬಿಜೆಪಿಯೇ ಪೂರ್ಣಗೊಳಿಸಲಿದೆ’ ಎಂದು ಮಹೇಶ್ ಹೇಳಿದರು.