ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿಕೆಶಿ ಜಾಮೀನು ಆದೇಶ ಕಾಯ್ದಿರಿಸಿದ ಇ.ಡಿ ನ್ಯಾಯಾಲಯ

ಅಕ್ಷರ ಗಾತ್ರ

ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ಇ.ಡಿ. ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಾದ –ಪ್ರತಿವಾದ ಅಲಿಸಿರುವ ನ್ಯಾಯಪೀಠ ಆಗಸ್ಟ್‌ 2ರವರೆಗೆ ಆದೇಶ ಕಾಯ್ದಿರಿಸಿದೆ.

ಆ.2ರಂದು ಮಧ್ಯಾಹ್ಬ 3ಕ್ಕೆ ಆದೇಶ ಪ್ರಕಟವಾಗಲಿದ್ದು, ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಿದೆ.

ಶಿವಕುಮಾರ್‌, ಅವರ ನಿಕಟವರ್ತಿಗಳಾದ ಉದ್ಯಮಿ ಸಚಿನ್‌ ನಾರಾಯಣ್‌, ಶರ್ಮಾ ಟ್ರಾನ್ಸ್‌ಪೋರ್ಟ್‌ ಮಾಲೀಕ ಸುನೀಲ್‌ ಕುಮಾರ್‌ ಶರ್ಮಾ, ದೆಹಲಿಯ ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ಎನ್‌. ವಿರುದ್ಧ ವಿಚಾರಣೆ ಆರಂಭಿಸುವಂತೆ ಕೋರಿ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT