<p><strong>ಬೆಂಗಳೂರು:</strong> ‘ಈ ಡಿ.ಕೆ. ಶಿವಕುಮಾರ್ ಹೆದರುವ ಮಗ ಅಲ್ಲ, ಕುತಂತ್ರಕ್ಕೆ ಹೆದರುವ ಮಗ ನಾನಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದರು.</p>.<p>ಮನೆಯ ಮುಂದೆ ಜಮಾಯಿಸಿದ್ದ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ‘30 ವರ್ಷಗಳ ರಾಜಕಾರಣದಲ್ಲಿ ಪಕ್ಷದ ಕಾರ್ಯಕರ್ತನಾಗಿ, ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದರು.</p>.<p>‘ದಾಳಿ ಮಾಡಿ ನನ್ನ ಬಾಯಿ ಮುಚ್ಚಿಸಲು ಯತ್ನಿಸುವವರಿಗೆ ದೇವರು ಒಳ್ಳೆಯದು ಮಾಡಲಿ. ನಾನು ಅಧಿಕಾರಕ್ಕೆ ಅಂಟಿ ಕುಳಿತುಕೊಳ್ಳುವವನಲ್ಲ. ಉಪ ಚುನಾವಣೆ ಮುಗಿಯುವರೆಗೆ ಈ ದಾಳಿ ಮುಂದುವರಿಯಲಿದೆ’ ಎಂದೂ ಹೇಳಿದರು.</p>.<p>‘ಸಿಬಿಐ ಅಧಿಕಾರಿಗಳು ಮನೆಯಲ್ಲಿ ಸೀರೆ, ಪ್ಯಾಂಟು ಹೀಗೆ ಎಲ್ಲ ಲೆಕ್ಕ ತೆಗೆದುಕೊಂಡಿದ್ದಾರೆ. ಸರ್ಕಾರ ಹೇಳಿದಂತೆ ಅಧಿಕಾರಿಗಳು ಕೇಳುತ್ತಾರೆ. ಸಿಬಿಐನವರಿಗೆ ವೃತ್ತಿಪರತೆ ಇದೆ. ಇ.ಡಿ ಅಧಿಕಾರಿಗಳು ಈ ರೀತಿ ಅಲ್ಲ’ ಎಂದೂ ಹೇಳಿದರು.</p>.<p>‘ಪಕ್ಷದ ಕಾರ್ಯಕರ್ತರು ಇಟ್ಟಿರುವ ಅಭಿಮಾನಕ್ಕೆ ಯಾವ ಬೆಲೆ ಕೊಡಲು ಸಾಧ್ಯ ಇಲ್ಲ. ಪಕ್ಷಕ್ಕೆ ಕಳಂಕ ತರುವ ಕೆಲಸವನ್ನು ಈ ಡಿ.ಕೆ. ಶಿವಕುಮಾರ್ ಕುಟುಂಬ ಮಾಡಿಲ್ಲ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಈ ಡಿ.ಕೆ. ಶಿವಕುಮಾರ್ ಹೆದರುವ ಮಗ ಅಲ್ಲ, ಕುತಂತ್ರಕ್ಕೆ ಹೆದರುವ ಮಗ ನಾನಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುಡುಗಿದರು.</p>.<p>ಮನೆಯ ಮುಂದೆ ಜಮಾಯಿಸಿದ್ದ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ‘30 ವರ್ಷಗಳ ರಾಜಕಾರಣದಲ್ಲಿ ಪಕ್ಷದ ಕಾರ್ಯಕರ್ತನಾಗಿ, ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದರು.</p>.<p>‘ದಾಳಿ ಮಾಡಿ ನನ್ನ ಬಾಯಿ ಮುಚ್ಚಿಸಲು ಯತ್ನಿಸುವವರಿಗೆ ದೇವರು ಒಳ್ಳೆಯದು ಮಾಡಲಿ. ನಾನು ಅಧಿಕಾರಕ್ಕೆ ಅಂಟಿ ಕುಳಿತುಕೊಳ್ಳುವವನಲ್ಲ. ಉಪ ಚುನಾವಣೆ ಮುಗಿಯುವರೆಗೆ ಈ ದಾಳಿ ಮುಂದುವರಿಯಲಿದೆ’ ಎಂದೂ ಹೇಳಿದರು.</p>.<p>‘ಸಿಬಿಐ ಅಧಿಕಾರಿಗಳು ಮನೆಯಲ್ಲಿ ಸೀರೆ, ಪ್ಯಾಂಟು ಹೀಗೆ ಎಲ್ಲ ಲೆಕ್ಕ ತೆಗೆದುಕೊಂಡಿದ್ದಾರೆ. ಸರ್ಕಾರ ಹೇಳಿದಂತೆ ಅಧಿಕಾರಿಗಳು ಕೇಳುತ್ತಾರೆ. ಸಿಬಿಐನವರಿಗೆ ವೃತ್ತಿಪರತೆ ಇದೆ. ಇ.ಡಿ ಅಧಿಕಾರಿಗಳು ಈ ರೀತಿ ಅಲ್ಲ’ ಎಂದೂ ಹೇಳಿದರು.</p>.<p>‘ಪಕ್ಷದ ಕಾರ್ಯಕರ್ತರು ಇಟ್ಟಿರುವ ಅಭಿಮಾನಕ್ಕೆ ಯಾವ ಬೆಲೆ ಕೊಡಲು ಸಾಧ್ಯ ಇಲ್ಲ. ಪಕ್ಷಕ್ಕೆ ಕಳಂಕ ತರುವ ಕೆಲಸವನ್ನು ಈ ಡಿ.ಕೆ. ಶಿವಕುಮಾರ್ ಕುಟುಂಬ ಮಾಡಿಲ್ಲ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>