ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಈ ಡಿ.ಕೆ. ಶಿವಕುಮಾರ್‌ ಹೆದರುವ ಮಗ ಅಲ್ಲ, ಕುತಂತ್ರಕ್ಕೆ ಹೆದರುವುದಿಲ್ಲ’

ಸಿಬಿಐ ದಾಳಿ ಮುಕ್ತಾಯಗೊಂಡ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಡಿಕೆಶಿ ಮಾತು
Last Updated 5 ಅಕ್ಟೋಬರ್ 2020, 13:32 IST
ಅಕ್ಷರ ಗಾತ್ರ

ಬೆಂಗಳೂರು: ‘ಈ ಡಿ.ಕೆ. ಶಿವಕುಮಾರ್‌ ಹೆದರುವ ಮಗ ಅಲ್ಲ, ಕುತಂತ್ರಕ್ಕೆ ಹೆದರುವ ಮಗ ನಾನಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಗುಡುಗಿದರು.

ಮನೆಯ ಮುಂದೆ ಜಮಾಯಿಸಿದ್ದ ಅಭಿಮಾನಿಗಳು ಮತ್ತು ಕಾಂಗ್ರೆಸ್‌ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್‌, ‘30 ವರ್ಷಗಳ ರಾಜಕಾರಣದಲ್ಲಿ ಪಕ್ಷದ ಕಾರ್ಯಕರ್ತನಾಗಿ, ಶಾಸಕನಾಗಿ, ಸಚಿವನಾಗಿ, ಸಂಸದನಾಗಿ ನಾನು ಯಾವುದೇ ತಪ್ಪು ಮಾಡಿಲ್ಲ’ ಎಂದರು.

‘ದಾಳಿ ಮಾಡಿ ನನ್ನ ಬಾಯಿ ಮುಚ್ಚಿಸಲು ಯತ್ನಿಸುವವರಿಗೆ ದೇವರು ಒಳ್ಳೆಯದು ಮಾಡಲಿ. ನಾನು ಅಧಿಕಾರಕ್ಕೆ ಅಂಟಿ ಕುಳಿತುಕೊಳ್ಳುವವನಲ್ಲ. ಉಪ ಚುನಾವಣೆ ಮುಗಿಯುವರೆಗೆ ಈ ದಾಳಿ ಮುಂದುವರಿಯಲಿದೆ’ ಎಂದೂ ಹೇಳಿದರು.

‘ಸಿಬಿಐ ಅಧಿಕಾರಿಗಳು ಮನೆಯಲ್ಲಿ ಸೀರೆ, ಪ್ಯಾಂಟು ಹೀಗೆ ಎಲ್ಲ ಲೆಕ್ಕ ತೆಗೆದುಕೊಂಡಿದ್ದಾರೆ. ಸರ್ಕಾರ ಹೇಳಿದಂತೆ ಅಧಿಕಾರಿಗಳು ಕೇಳುತ್ತಾರೆ. ಸಿಬಿಐನವರಿಗೆ ವೃತ್ತಿಪರತೆ ಇದೆ. ಇ.ಡಿ ಅಧಿಕಾರಿಗಳು ಈ ರೀತಿ ಅಲ್ಲ’ ಎಂದೂ ಹೇಳಿದರು.

‘ಪಕ್ಷದ ಕಾರ್ಯಕರ್ತರು ಇಟ್ಟಿರುವ ಅಭಿಮಾನಕ್ಕೆ ಯಾವ ಬೆಲೆ ಕೊಡಲು ಸಾಧ್ಯ ಇಲ್ಲ. ಪಕ್ಷಕ್ಕೆ ಕಳಂಕ ತರುವ ಕೆಲಸವನ್ನು ಈ ಡಿ.ಕೆ. ಶಿವಕುಮಾರ್‌ ಕುಟುಂಬ ಮಾಡಿಲ್ಲ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT