‘ಕಳೆದ ಅಧಿವೇಶನದಲ್ಲಿ ಹತ್ತು ದಿನಗಳ ಒಳಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಮಾತು ಕೊಟ್ಟಿದ್ದರು. ಆದರೆ, ಮೂರು ತಿಂಗಳು ಕಳೆದರೂ ಮಂಡಳಿ ರಚನೆ ಆಗಿಲ್ಲ, ಸಭೆಯೂ ನಡೆದಿಲ್ಲ. ಬಜೆಟ್ನಲ್ಲಿ ₹ 1,500 ಕೋಟಿ ಇಡಲಾಗಿದೆ. ₹ 125 ಕೋಟಿ ಅಷ್ಟೇ ಖರ್ಚಾಗಿದೆ. ಖಾಲಿ ಹುದ್ದೆ ಭರ್ತಿ ಆಗಿಲ್ಲ.ಕಲ್ಯಾಣ ಕರ್ನಾಟಕಕ್ಕೆ ಆದ ಅನ್ಯಾಯದ ಬಗ್ಗೆ ಹೋರಾಟ ಮಾಡುತ್ತೇವೆ’ ಎಂದರು.