ಕೆಪಿಸಿಸಿಯ ಟ್ವಿಟರ್ ಹ್ಯಾಂಡಲ್ನಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಏಕವಚನದಲ್ಲಿ, ಅವಹೇಳನಾಕಾರಿಯಾಗಿ ನಿಂದಿಸಲಾಗಿತ್ತು. ಈ ಕುರಿತು ಸೋಮವಾರ ರಾತ್ರಿ ವಿಷಾದ ವ್ಯಕ್ತಪಡಿಸಿದ್ದ ಶಿವಕುಮಾರ್, ಟ್ವೀಟ್ಗಳನ್ನು ತಕ್ಷಣವೇ ತೆಗೆದುಹಾಕಲು ಸೂಚಿಸಲಾಗಿದೆ. ಈ ಅಚಾತುರ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.