<p><strong>ಹುಬ್ಬಳ್ಳಿ</strong>: ಅಧಿಕಾರ ಇಲ್ಲದಿದ್ದರೂ ಮುಖ್ಯಮಂತ್ರಿ ಖುರ್ಚಿಗೆ ಜಿದ್ದಿಗೆ ಬಿದ್ದಿರುವ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತುಗಳು ಅಲ್ಲ; ಅಧಿಕಾರಕ್ಕೆ ಬಡಿದಾಡುತ್ತಿರುವ ಹೋರಿಗಳು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಟೀಕಿಸಿದರು.</p>.<p>ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಸಿಡಿ ಪ್ರಕರಣದಲ್ಲಿ ಹಲವರ ಕೈವಾಡ ಇದೆ. ಕಾಂಗ್ರೆಸ್ ನಾಯಕರು ಹಾಗೂ ಕೆಲ ಸಂಘ ಸಂಸ್ಥೆಗಳ ಹೆಸರು ಕೇಳಿ ಬರುತ್ತಿವೆ. ಈ ಪಿತೂರಿಯಲ್ಲಿ ಯಾರೆಲ್ಲ ಇದ್ದಾರೆ ಎಂದು ತನಿಖೆಯಿಂದ ಹೊರಬರಬೇಕಾಗಿದೆ ಎಂದರು.</p>.<p>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪಕ್ಷ ತೊರೆದು ಬಂದ ನಾಯಕರ ತೇಜೋವಧೆ ಯತ್ನ ನಡೆಯುತ್ತಿದೆ. ಹೀಗಾಗಿ 6 ಸಚಿವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಸಿಡಿ ಅಂದ ಕೂಡಲೇ ರಾಸಲೀಲೆ, ಹನಿಟ್ರ್ಯಾಪ್ ಅಲ್ಲ. ಪೋನ್ ಸಂಭಾಷಣೆ, ದಾಖಲಾತಿ ವಿಚಾರ ಸಹ ಸಿಡಿಯಲ್ಲಿ ಇರಬಹುದು ಎಂದರು.</p>.<p>ವಿನಾಕಾರಣ ತೇಜೋವಧೆ ಆದ ನಂತರ ನಾಯಕರ ಗೌರವ ಕಡಿಮೆ ಆಗುತ್ತೆ. ಹೀಗಾಗಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಬಿಜೆಪಿ ಸರ್ಕಾರ ಹಾಗೂ ಸಚಿವರ ಹೆಸರು ಕೆಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು.</p>.<p>ಶ್ರೀರಾಮುಲು ಶಕ್ತಿ ಕುಂದಿಲ್ಲ,ನಾನು ರಾಜ್ಯ ಪ್ರವಾಸ ಮಾಡುತ್ತಾ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ಸ್ಥಾನಮಾನ ನೀಡುವ ಬಗ್ಗೆ ನಾನು ಎನೂ ಕೇಳಲ್ಲ, ಬೇಸರವೂ ಸಹ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಅಧಿಕಾರ ಇಲ್ಲದಿದ್ದರೂ ಮುಖ್ಯಮಂತ್ರಿ ಖುರ್ಚಿಗೆ ಜಿದ್ದಿಗೆ ಬಿದ್ದಿರುವ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತುಗಳು ಅಲ್ಲ; ಅಧಿಕಾರಕ್ಕೆ ಬಡಿದಾಡುತ್ತಿರುವ ಹೋರಿಗಳು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಟೀಕಿಸಿದರು.</p>.<p>ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಸಿಡಿ ಪ್ರಕರಣದಲ್ಲಿ ಹಲವರ ಕೈವಾಡ ಇದೆ. ಕಾಂಗ್ರೆಸ್ ನಾಯಕರು ಹಾಗೂ ಕೆಲ ಸಂಘ ಸಂಸ್ಥೆಗಳ ಹೆಸರು ಕೇಳಿ ಬರುತ್ತಿವೆ. ಈ ಪಿತೂರಿಯಲ್ಲಿ ಯಾರೆಲ್ಲ ಇದ್ದಾರೆ ಎಂದು ತನಿಖೆಯಿಂದ ಹೊರಬರಬೇಕಾಗಿದೆ ಎಂದರು.</p>.<p>ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪಕ್ಷ ತೊರೆದು ಬಂದ ನಾಯಕರ ತೇಜೋವಧೆ ಯತ್ನ ನಡೆಯುತ್ತಿದೆ. ಹೀಗಾಗಿ 6 ಸಚಿವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಸಿಡಿ ಅಂದ ಕೂಡಲೇ ರಾಸಲೀಲೆ, ಹನಿಟ್ರ್ಯಾಪ್ ಅಲ್ಲ. ಪೋನ್ ಸಂಭಾಷಣೆ, ದಾಖಲಾತಿ ವಿಚಾರ ಸಹ ಸಿಡಿಯಲ್ಲಿ ಇರಬಹುದು ಎಂದರು.</p>.<p>ವಿನಾಕಾರಣ ತೇಜೋವಧೆ ಆದ ನಂತರ ನಾಯಕರ ಗೌರವ ಕಡಿಮೆ ಆಗುತ್ತೆ. ಹೀಗಾಗಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಬಿಜೆಪಿ ಸರ್ಕಾರ ಹಾಗೂ ಸಚಿವರ ಹೆಸರು ಕೆಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು.</p>.<p>ಶ್ರೀರಾಮುಲು ಶಕ್ತಿ ಕುಂದಿಲ್ಲ,ನಾನು ರಾಜ್ಯ ಪ್ರವಾಸ ಮಾಡುತ್ತಾ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ಸ್ಥಾನಮಾನ ನೀಡುವ ಬಗ್ಗೆ ನಾನು ಎನೂ ಕೇಳಲ್ಲ, ಬೇಸರವೂ ಸಹ ಇಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>