‘12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧ್ಯಕ್ಷರನ್ನು ಬದಲಿಸುವ, ಮುಂಚೂಣಿ ಘಟಕಗಳಿಗೆ ಅಧ್ಯಕ್ಷರ ನೇಮಕ ಸಂಬಂಧವೂ ಸಮಾಲೋಚನೆ ನಡೆಯಲಿದೆ. ಅಲ್ಲದೆ, ಅಲ್ಪಸಂಖ್ಯಾತ, ಹಿಂದುಳಿದ ವರ್ಗಗಳ ಘಟಕ, ಮಹಿಳಾ ಘಟಕ, ಸೇವಾದಳ ಅಧ್ಯಕ್ಷರನ್ನು ಬದಲಿಸಿ ಹೊಸಬರನ್ನು ನೇಮಿಸುವ ಬಗ್ಗೆ ಸಮಾಲೋಚನೆ ನಡೆಯಲಿದೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ಚರ್ಚಿಸಿ, ಇಬ್ಬರ ಒಮ್ಮತ ಬಳಿಕ ವಿವಿಧ ಘಟಕಗಳು ಮತ್ತು ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಿ ಹೈಕಮಾಂಡ್ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿಯೂ ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡದಂತೆ ವರಿಷ್ಠರು ಕಟ್ಟುನಿಟ್ಟಿನ ಸೂಚನೆ ನೀಡುವ ಸಾಧ್ಯತೆಯೂ ಇದೆ ಎಂದೂ ಮೂಲಳು ತಿಳಿಸಿವೆ.