ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ನಾವು ಮೂರನೇ ಅಲೆ ಪ್ರಾರಂಭಕ್ಕೂ ಮುನ್ನವೇ ಹೋರಾಟದ ರೂಪರೇಷೆ ಸಿದ್ಧಪಡಿಸಿದ್ದೆವು. ಆದರೆ, ಕೋವಿಡ್ ಕರ್ಫ್ಯೂ ಹೆಸರಿನಲ್ಲಿ ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ನಡೆಸಿದೆ. ಹೋರಾಟ ಹತ್ತಿಕಲು ಬಿಜೆಪಿ ನಾನಾ ರೀತಿಯಲ್ಲಿ ಷಡ್ಯಂತ್ರ ಮಾಡುತ್ತಿದೆ. ನಾವು ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ. ಕೋವಿಡ್ ನಿಯಮ ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲಿಸಿ, ಪೊಲೀಸರು ಕೇಸ್ ಹಾಕಬಹುದು ಅಷ್ಟೆ. ನಿಯಮ ಪಾಲಿಸಿದರೆ ಕೇಸ್ ಏಕೆ ಹಾಕುತ್ತಾರೆ’ ಎಂದು ಪ್ರಶ್ನೆಗೆ ಉತ್ತರಿಸಿದರು.