ಬೆಂಗಳೂರು: ಪರಿಷ್ಕೃತ ಪಠ್ಯ ಪುಸ್ತಕದ ಪ್ರತಿಯನ್ನು ವೇದಿಕೆಯಲ್ಲೆ ಹರಿದು ಎಸೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಳೆಯ ಪಠ್ಯಪುಸ್ತಕಗಳನ್ನೇ ಮುಂದುವರಿಸುವಂತೆ ಆಗ್ರಹಿಸಿದರು.
ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡ ಅವರು ಭಾಷಣ ಮುಗಿಸಿದ ಬಳಿಕ ಪರಿಷ್ಕೃತ ಪಠ್ಯಪುಸ್ತಕದ ಪ್ರತಿಯೊಂದನ್ನು ಹರಿದು ಎಸೆದರು.
ಈ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಹಳ್ಳಿ, ಹಳ್ಳಿಗೂ ಹೋರಾಟ ಕೊಂಡೊಯ್ಯುತ್ತೇವೆ. ಸರ್ಕಾರ ತಕ್ಷಣ ಪರಿಷ್ಕೃತ ಪಠ್ಯಪುಸ್ತಕಗಳನ್ನು ವಾಪಸ್ ಪಡೆಯಬೇಕು. ಇಲ್ಲವಾದರೆ 2024ರ ಚುನಾವಣೆಯ ಬಳಿಕ ಪರಿಷ್ಕೃತ ಪಠ್ಯಪುಸ್ತಕಗಳನ್ನು ಕಿತ್ತೆಸೆಯಲಾಗುವುದು ಎಂದರು.
ಕೆಟ್ಟ ಸಂಸ್ಕೃತಿಯ ಹುಟ್ಟನ್ನು ಪ್ರಾರಂಭದಲ್ಲೇ ಚಿವುಟಬೇಕು, ಉತ್ತಮ ಸಮಾಜದ ಕಟ್ಟುವಿಕೆ ನಮ್ಮೆಲ್ಲರ ಧ್ಯೇಯ. pic.twitter.com/rWIDQmZIX4