ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದ ಪಟ್ಟಿಯ ಕುರಿತು ಪಕ್ಷದಲ್ಲಿ ಯಾರ ವಿರೋಧವೂ ಇಲ್ಲ. ಈ ಸಂಬಂಧ ವಿಳಂಬವೂ ಆಗಿಲ್ಲ. ಅಧಿಕಾರದ ಆಕಾಂಕ್ಷೆ ಇಲ್ಲದ, ಪಕ್ಷಕ್ಕೆ ಪೂರ್ಣಾವಧಿ ಸೇವೆ ಸಲ್ಲಿಸುವ ಯುವ ಮುಖಂಡರಿಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ದಸರಾ ಹಬ್ಬಕ್ಕೆ ಮೊದಲೇ ನೇಮಕದ ಆದೇಶ ಹೊರಬೀಳಲಿದೆ ಎಂದರು.