ಬೆಂಗಳೂರು: ‘ರಾಜ್ಯದಲ್ಲಿ ಕುಲಪತಿ ಹುದ್ದೆ ಮಾರಾಟಕ್ಕಿಡಲಾಗಿದೆ. ಇಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಭ್ರಷ್ಟಾಚಾರವೇ ಪ್ರೊ. ಅಶೋಕ್ ಕುಮಾರ್ ಆತ್ಮಹತ್ಯೆಗೆ ಕಾರಣ ಎಂದು ವ್ಯಾಪಕ ಚರ್ಚೆಯಾಗುತ್ತಿದೆ. ಹೀಗಾಗಿ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.