ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರಕ್ಕೆ ಡಿಕೆಶಿ ಬ್ರ್ಯಾಂಡ್‌: ಅಶ್ವತ್ಥನಾರಾಯಣ

Last Updated 6 ಜೂನ್ 2022, 12:38 IST
ಅಕ್ಷರ ಗಾತ್ರ

ಮಂಡ್ಯ: ‘ಭ್ರಷ್ಟಾಚಾರಕ್ಕೆ ಡಿ.ಕೆ.ಶಿವಕುಮಾರ್ ಬ್ರ್ಯಾಂಡ್‌ ಆಗಿದ್ದಾರೆ, ಅವರ ಯಾವುದೇ ಆಪಾದನೆಗಳಿಗೆ ನಾನು ಕಿಮ್ಮತ್ತು ಕೊಡುವುದಿಲ್ಲ. ನಾನು ತೆರೆದ ಪುಸ್ತಕ, ನನ್ನ ಜೀವನದಲ್ಲಿ ಎಂದಿಗೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ’ ಎಂದು ಉನ್ನತಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೋಮವಾರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಪಿಎಸ್‌ಐ ಅಕ್ರಮದಲ್ಲಿ ಬಂಧನಕ್ಕೊಳಗಾಗಿರುವ ದರ್ಶನ್‌ಗೌಡ ನನ್ನ ಸಂಬಂಧಿ ಎನ್ನುವ ವಿಚಾರದಲ್ಲಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ವಿಶ್ವದಲ್ಲಿರುವ ಒಕ್ಕಲಿಗರೆಲ್ಲರೂ ನನ್ನ ಸಂಬಂಧಿಕರೇ ಆಗಿದ್ದಾರೆ, ನಾನು ಇಲ್ಲ ಎನ್ನುವುದಿಲ್ಲ. ನನ್ನ ವಿರುದ್ಧ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ, ಯಾವುದೇ ತನಿಖೆಗೂ ನಾನು ಸಿದ್ಧ’ ಎಂದರು.

‘ಕಾಂಗ್ರೆಸ್‌ ಮುಖಂಡರು ಹಿಟ್‌ ಅಂಡ್‌ ರನ್‌ ಮಾಡಿಕೊಂಡು ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಗಾಜಿನ ಮನೆಯಲ್ಲಿರುವ ಅವರು ಅವರ ಸಮಸ್ಯೆ ನೋಡಿಕೊಳ್ಳಲಿ. ಕಾಂಗ್ರೆಸ್‌ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಹಗರಣ ಮಾಡಿದ್ದಾರೆ, ರಾಜ್ಯವನ್ನು ಲೂಟಿ ಮಾಡಿದ್ದಾರೆ. ಯಾವುದೇ ಆರೋಪ ಬಂದರೂ ನಮ್ಮ ಸರ್ಕಾರ ಅವುಗಳನ್ನು ತನಿಖೆ ನಡೆಸುತ್ತಿದೆ’ ಎಂದರು.

‘ಕಾಂಗ್ರೆಸ್‌ ಅಲ್ಪಸ್ವಲ್ಪ ಉಳಿದಿತ್ತು, ಚಡ್ಡಿ ಸುಡುವ ಅಭಿಯಾನ ಮಾಡುವ ಮೂಲಕ ಪಕ್ಷವನ್ನೂ ಸುಟ್ಟುಕೊಳ್ಳುತ್ತಿದೆ. ಆರ್‌ಎಸ್‌ಎಸ್‌ ಬಗ್ಗೆ ಪ್ರತಿಯೊಬ್ಬ ಭಾರತೀಯನಿಗೂ ಅಭಿಮಾನ ಇದೆ. ಮುಂದೆ ಕರ್ನಾಟಕ ಕಾಂಗ್ರೆಸ್‌ ಮುಕ್ತವಾಗಲಿದೆ’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT