<p><strong>ಬೆಂಗಳೂರು: </strong>ಪೊಲೀಸರನ್ನು ಬಳಸಿಕೊಂಡು ಅಂಗಡಿಗಳನ್ನು ಮುಚ್ಚಿಸಿರುವ ರಾಜ್ಯ ಸರ್ಕಾರ, ವರ್ತಕರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಆಗ್ರಹಿಸಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತೆರಿಗೆ ಪಾವತಿಸಿ ವಹಿವಾಟು ನಡೆಸುತ್ತಿದ್ದ ವರ್ತಕರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಸಂಕಷ್ಟದ ಕಾಲದಲ್ಲೂ ಜನರಿಗೆ ಉದ್ಯೋಗ ನೀಡಿರುವವರನ್ನು ಅವಮಾನಿಸುತ್ತಿದೆ’ ಎಂದು ದೂರಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿ. ಆದರೆ, ಅದರಿಂದ ತೊಂದರೆಗೊಳಗಾದ ಜನರಿಗೆ ಪರಿಹಾರ ನೀಡಬೇಕು. ವರ್ತಕರು, ನೌಕರರು, ಅಸಂಘಟಿತ ಕಾರ್ಮಿಕರು ಎಲ್ಲರಿಗೂ ನೆರವು ನೀಡಬೇಕು ಎಂದು ಒತ್ತಾಯಿಸಿದರು.</p>.<p>ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಆರ್ಥಿಕ ಸಮಸ್ಯೆಯಿಂದ ಪಾರು ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. ಬ್ಯಾಂಕ್ಗಳ ಮುಖ್ಯಸ್ಥರ ಜತೆ ಸಭೆ ನಡೆಸಿ, ಸಾಲದ ಕಂತುಗಳ ಪಾವತಿಗೆ ಕಾಲಾವಕಾಶ ಮತ್ತು ಬಡ್ಡಿ ವಿನಾಯಿತಿ ಕೊಡಿಸಬೇಕು ಎಂದರು.</p>.<p>ರೆಮ್ಡೆಸಿವಿರ್ ಔಷಧಿ, ಆಮ್ಲಜನಕ ಪೂರೈಕೆ ತ್ವರಿತ ಕ್ರಮ ಕೈಗೊಳ್ಳಬೇಕು. ಕೋವಿಡ್ನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ತುರ್ತಾಗಿ ವ್ಯವಸ್ಥೆ ಮಾಡಬೇಕು.ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಸಭೆ ನಡೆಸಿದ ಸಚಿವ ಬಿ. ಶ್ರೀರಾಮುಲು ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.</p>.<p>ಸರ್ಕಾರ ಅಘೋಷಿತ ಲಾಕ್ಡೌನ್ ಜಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪ್ರಮುಖ ಮುಖಂಡರು, ಶಾಸಕರ ಜತೆ ಸಭೆ ನಡೆಸಿದ ಶಿವಕುಮಾರ್, ಚರ್ಚೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪೊಲೀಸರನ್ನು ಬಳಸಿಕೊಂಡು ಅಂಗಡಿಗಳನ್ನು ಮುಚ್ಚಿಸಿರುವ ರಾಜ್ಯ ಸರ್ಕಾರ, ವರ್ತಕರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಆಗ್ರಹಿಸಿದರು.</p>.<p>ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತೆರಿಗೆ ಪಾವತಿಸಿ ವಹಿವಾಟು ನಡೆಸುತ್ತಿದ್ದ ವರ್ತಕರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಸಂಕಷ್ಟದ ಕಾಲದಲ್ಲೂ ಜನರಿಗೆ ಉದ್ಯೋಗ ನೀಡಿರುವವರನ್ನು ಅವಮಾನಿಸುತ್ತಿದೆ’ ಎಂದು ದೂರಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿ. ಆದರೆ, ಅದರಿಂದ ತೊಂದರೆಗೊಳಗಾದ ಜನರಿಗೆ ಪರಿಹಾರ ನೀಡಬೇಕು. ವರ್ತಕರು, ನೌಕರರು, ಅಸಂಘಟಿತ ಕಾರ್ಮಿಕರು ಎಲ್ಲರಿಗೂ ನೆರವು ನೀಡಬೇಕು ಎಂದು ಒತ್ತಾಯಿಸಿದರು.</p>.<p>ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಆರ್ಥಿಕ ಸಮಸ್ಯೆಯಿಂದ ಪಾರು ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಬೇಕು. ಬ್ಯಾಂಕ್ಗಳ ಮುಖ್ಯಸ್ಥರ ಜತೆ ಸಭೆ ನಡೆಸಿ, ಸಾಲದ ಕಂತುಗಳ ಪಾವತಿಗೆ ಕಾಲಾವಕಾಶ ಮತ್ತು ಬಡ್ಡಿ ವಿನಾಯಿತಿ ಕೊಡಿಸಬೇಕು ಎಂದರು.</p>.<p>ರೆಮ್ಡೆಸಿವಿರ್ ಔಷಧಿ, ಆಮ್ಲಜನಕ ಪೂರೈಕೆ ತ್ವರಿತ ಕ್ರಮ ಕೈಗೊಳ್ಳಬೇಕು. ಕೋವಿಡ್ನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ತುರ್ತಾಗಿ ವ್ಯವಸ್ಥೆ ಮಾಡಬೇಕು.ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಸಭೆ ನಡೆಸಿದ ಸಚಿವ ಬಿ. ಶ್ರೀರಾಮುಲು ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.</p>.<p>ಸರ್ಕಾರ ಅಘೋಷಿತ ಲಾಕ್ಡೌನ್ ಜಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪ್ರಮುಖ ಮುಖಂಡರು, ಶಾಸಕರ ಜತೆ ಸಭೆ ನಡೆಸಿದ ಶಿವಕುಮಾರ್, ಚರ್ಚೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>