ಕೇಂದ್ರ ಹಣಕಾಸು ಸಚಿವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸೋಮವಾರ ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಗಣಿಗಾರಿಕೆ ನಡೆದ ಜಿಲ್ಲೆಯೊಳಗೆ ಮಾತ್ರ ಡಿಎಂಎಫ್ ಮೊತ್ತ ಬಳಕೆ ಮಾಡಬೇಕೆಂಬ ನಿಯಮವಿದೆ. ಅದನ್ನು ಸಡಿಲಿಸಿ, ರಾಜ್ಯ ಸರ್ಕಾರಕ್ಕೆ ಒಂದು ಭಾಗವನ್ನು ವರ್ಗಾಯಿಸಲು ಅವಕಾಶ ಕಲ್ಪಿಸಬೇಕು. ಇದರಿಂದ ಅದಿರು ಸಾಗಣೆಯಿಂದ ಹಾನಿಯಾದ ಜಿಲ್ಲೆಗಳಲ್ಲೂ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ’ ಎಂದರು.