ಮುಂದಿನ ದಿನಗಳಲ್ಲಿ ಚುನಾವಣೆಯ ವರ್ಷವಾಗಿದೆ ಅದಕ್ಕಾಗಿ ಕಾರ್ಯಕರ್ತರು ಹಾಗೂ ಮುಖಂಡರು ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಲೋಕಸಭಾ ಚುನಾವಣೆ ಪ್ರಧಾನಿ ಮೋದಿಯವರ ಅಲೆಯಲ್ಲಿ ಗೆಲುವು ಸಾಧಿಸಬಹುದು ಆದರೆ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವುದು ಸವಾಲಿನದಾಗಿದೆ. ಗೆಲ್ಲುತ್ತೇವೆ ಎಂಬ ಭ್ರಮೆ ಬೇಡ ಎಂದು ಎಚ್ಚರಿಸಿದ ಬಿಎಸ್ವೈ ಅಭಿವೃದ್ಧಿ ಕಾರ್ಯಗಳ ಮೂಲ ಪ್ರತಿ ಮನೆಮನೆಗೂ ರಾಜ್ಯ ಬಿಜೆಪಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಹಾಗೂ ಮುಂದಿನ ತಿಂಗಳಿನಿಂದ ನಿರಂತರವಾಗಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷವನ್ನು ಸಂಘಟನೆ ಮಾಡಲಾಗುವುದು ಕಾರ್ಯಕರ್ತರು ಮುಖಂಡರು ಆತ್ಮವಿಶ್ವಾಸದಿಂದ ಇರಬೇಕು. ಮತ್ತೊಮ್ಮೆ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ನಡೆಯಲಿದೆ. ಮತ್ತೊಮ್ಮೆ 140 ಸ್ಥಾನಗಳಲ್ಲಿಬಿಜೆಪಿ ಗೆಲುವು ಪಡೆಯಲಿದೆ. ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ. ಪ.ಜಾತಿ, ಪ.ಪಂಗಡ, ಯುವಮೋರ್ಚಾ ಹಾಗೂ ಮಹಿಳಾ ಸಂಘಟನೆಗಳನ್ನು ರೂಪಿಸಿ ಪಕ್ಷದ ಗೆಲುವಿಗೆ ಸಹಕರಿಸಬೇಕು ಎಂದರು.