ಹುಬ್ಬಳ್ಳಿಯ ವೈದ್ಯ ಹಾಗೂ ಸಾಮಾಜಿಕ ಹೋರಾಟಗಾರ ಡಾ. ವಿನೋದ್ ಜಿ. ಕುಲಕರ್ಣಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ವೈದ್ಯರ ರಕ್ಷಣೆಗೆ ಅನುಸರಿಸಿರುವ ಕ್ರಮಗಳನ್ನು ಒಳಗೊಂಡ ಆಕ್ಷೇಪಣಾ ಅರ್ಜಿಯನ್ನು 3 ವಾರಗಳಲ್ಲಿ ಸಲ್ಲಿಸಬೇಕು’ ಎಂದು ತಿಳಿಸಿತು.