ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ರವೀಂದ್ರನಾಥ್ ಪರ ತೀರ್ಪು ನೀಡಿದ್ದರೂ ಹುದ್ದೆ ತೋರಿಸದ ಕಾರಣಕ್ಕೆ ರವೀಂದ್ರನಾಥ್ ಅವರು ಬೇಸತ್ತು ‘ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದ ಜೀವ’ ಎಂದು ಆಟೊ ಮೇಲೆ ಬರೆಸಿಕೊಂಡು, ಅದನ್ನು ಚಾಲನೆ ಮಾಡಿಯೇ ಜೀವನ ನಿರ್ವಹಣೆ ಮಾಡುತ್ತಿದ್ದರು. ಈ ಬಗ್ಗೆ ಬಂದ ವರದಿಯಿಂದ ಎಚ್ಚೆತ್ತುಕೊಂಡ ಸರ್ಕಾರ, ಅವರನ್ನು ಕೊಪ್ಪಳಕ್ಕೆ ವರ್ಗಾವಣೆ ಮಾಡಿದೆ. ಡಾ. ರವೀಂದ್ರನಾಥ್ ಅವರು ಎರಡು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.