ಸಭೆಯ ಬಳಿಕ ಮಾತನಾಡಿದ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಜಿ.ಎ. ಶ್ರೀನಿವಾಸ್, ‘ನಮ್ಮ ಬೇಡಿಕೆಗಳ ಕುರಿತು ಸಚಿವರು ನೀಡಿರುವ ಭರವಸೆ ಬಗ್ಗೆ ಎಲ್ಲ ಜಿಲ್ಲೆಗಳಲ್ಲಿರುವ ಸಂಘದ ಪದಾಧಿಕಾರಿಗಳ ಜೊತೆ ವಿಚಾರ ವಿನಿಮಯ ಮಾಡಿ, ಇದೇ 18ರಂದು ಮತ್ತೊಮ್ಮೆ ಸಚಿವರ ಜತೆ ಚರ್ಚಿಸುತ್ತೇವೆ. ಅಲ್ಲಿಯವರೆಗೆ ಎಲ್ಲ ಸರ್ಕಾರಿ ಸಭೆಗಳನ್ನು ಬಹಿಷ್ಕರಿಸುವ ಮೂಲಕ ‘ಅಸಹಕಾರ’ ಮುಷ್ಕರ ಮುಂದುವರಿಯಲಿದೆ’ ಎಂದರು.