ಡೊಳ್ಳು ಕುಣಿತ, ಗೊರವರ ಕುಣಿತ, ತಮಟೆ ವಾದನ, ಪಟ ಕುಣಿತ, ಕಂಸಾಳೆ, ಪೂಜಾ ಕುಣಿತ ಸೇರಿದಂತೆ ಜಾನಪದ ಕಲೆಯ ವಿವಿಧ ಪ್ರಕಾರಗಳಲ್ಲಿ ಸಾಧನೆ ಮಾಡಿದ ಕಲಾವಿದರ ಪಟ್ಟಿಯನ್ನು ಈ ಹಿಂದೆ ಸಿದ್ಧ ಪಡಿಸಲಾಗಿತ್ತು. ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರ್ದೇಶಕರ ಆಯ್ಕೆಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನೂ ರಚನೆ ಮಾಡಲಾಗಿತ್ತು.