<p><strong>ಬೆಂಗಳೂರು:</strong> ಮೇಕೆದಾಟು ಯೋಜನೆಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಸೋಮಾರಿತನ ಮತ್ತು ವಿಳಂಬ ಧೋರಣೆಯೇ ಯೋಜನೆ ನನೆಗುದಿಗೆ ಬೀಳಲು ಕಾರಣ ಎಂದು ವಿಧಾನಪರಿಷತ್ನ ಮಾಜಿ ಸದಸ್ಯ ಹಾಗೂ ಸಾಹಿತಿ ದೊಡ್ಡರಂಗೇಗೌಡ ಹೇಳಿದ್ದಾರೆ.</p>.<p>ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್, ಓಮೈಕ್ರಾನ್ ವ್ಯಾಪಕವಾಗಿ ಹರಡಿದೆ. ಜನ ಸಂದಣಿ ಸೇರಬಾರದೆಂಬ ನಿಯಮವಿದ್ದರೂ ಯಾವ ಪುರುಷಾರ್ಥಕ್ಕೆ ಈ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/karnataka-high-court-angry-at-state-government-not-taking-action-against-congress-mekedatu-padayatre-901298.html" target="_blank"> ಕೆಪಿಸಿಸಿ ಪಾದಯಾತ್ರೆ: ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆ</a></strong></p>.<p>ಜಾಥಾ ಈಗ ತೀವ್ರತೆ ಕಳೆದುಕೊಂಡಿದೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಏಕೈಕ ಉದ್ದೇಶದಿಂದ ಪಾದಯಾತ್ರೆ ನಡೆಸುತ್ತಿದ್ದಾರೆ. ಇಂಥ ಮೋಸದ ಯಾತ್ರೆಗಳು ಫಲ ನೀಡುವುದಿಲ್ಲ. ಕಾನೂನು ಬಲ್ಲವರಿಂದಲೇ ಕಾನೂನು ಉಲ್ಲಂಘನೆ ಆಗುತ್ತಿರುವುದು ವಿಷಾದನೀಯ ಎಂದರು.</p>.<p>ಈ ಯೋಜನೆ ಕುರಿತು ಚೆನ್ನೈನ ಹಸಿರುಪೀಠದಲ್ಲಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ. ಆದರೆ ತಮಿಳುನಾಡು ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬಾಕಿ ಇದೆ. ಇದರ ವಿಲೇವಾರಿ ಆಗದೇ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಈ ರೀತಿ ಇರುವಾಗ ಪಾದಯಾತ್ರೆ ಎಷ್ಟರ ಮಟ್ಟಿಗೆ ಸರಿ. ಸಂವಿಧಾನ ಓದಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಮ್ಮ ಬೆನ್ನು ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದರು.</p>.<p>ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೃತಿ ಮಾತನಾಡಿ, ಕೋವಿಡ್ನ ಎರಡು ಅಲೆಗಳಿಂದ ಜನರು ಸಂಷಕ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಲಾಕ್ಡೌನ್ ಯಾರಿಗೂ ಬೇಕಾಗಿಲ್ಲ. ಈ ಸಂದರ್ಭದಲ್ಲಿ ಪಾದಯಾತ್ರೆ ಸರಿಯಲ್ಲ. ಮೇಕೆದಾಟು ಯೋಜನೆಗೆ ಯಾವ ಕನ್ನಡಿಗನ ವಿರೋಧವೂ ಇಲ್ಲ. ಆದರೆ ಜಾಥಾ ಹೆಸರಿನಲ್ಲಿ ದಾರಿ ತಪ್ಪಿಸುವ ಪ್ರವೃತ್ತಿ ಸಲ್ಲದು ಎಂದು ಹೇಳಿದರು.</p>.<p>‘ಕಾವೇರಿ ನಮ್ಮ ತಾಯಿ. ಕಾವೇರಿ ವಿಚಾರ, ನಾಡಿನ ವಿಚಾರ ಬಂದಾಗ ಎಲ್ಲರೂ ಜತೆಗೂಡಬೇಕು. ಪಕ್ಷ ಕಟ್ಟುವ ಕೆಲಸಕ್ಕಾಗಿ ಇದನ್ನು ಬಳಸಿಕೊಳ್ಳಬಾರದು. ಅಮಾಯಕರ ಜೀವವನ್ನು ಬಲಿ ಕೊಡಬಾರದು’ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/district/bengaluru-city/education-department-extends-holiday-for-schools-in-bengaluru-due-to-covid-cases-increasing-901305.html" target="_blank">ಬೆಂಗಳೂರಿನಲ್ಲಿ ಜ.31 ರವರೆಗೆ ಶಾಲೆಗಳಿಗೆ ರಜೆ ವಿಸ್ತರಣೆ: ಸಚಿವ ಬಿ.ಸಿ. ನಾಗೇಶ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೇಕೆದಾಟು ಯೋಜನೆಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಸೋಮಾರಿತನ ಮತ್ತು ವಿಳಂಬ ಧೋರಣೆಯೇ ಯೋಜನೆ ನನೆಗುದಿಗೆ ಬೀಳಲು ಕಾರಣ ಎಂದು ವಿಧಾನಪರಿಷತ್ನ ಮಾಜಿ ಸದಸ್ಯ ಹಾಗೂ ಸಾಹಿತಿ ದೊಡ್ಡರಂಗೇಗೌಡ ಹೇಳಿದ್ದಾರೆ.</p>.<p>ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೋವಿಡ್, ಓಮೈಕ್ರಾನ್ ವ್ಯಾಪಕವಾಗಿ ಹರಡಿದೆ. ಜನ ಸಂದಣಿ ಸೇರಬಾರದೆಂಬ ನಿಯಮವಿದ್ದರೂ ಯಾವ ಪುರುಷಾರ್ಥಕ್ಕೆ ಈ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಪ್ರಶ್ನಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/karnataka-news/karnataka-high-court-angry-at-state-government-not-taking-action-against-congress-mekedatu-padayatre-901298.html" target="_blank"> ಕೆಪಿಸಿಸಿ ಪಾದಯಾತ್ರೆ: ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗ ತರಾಟೆ</a></strong></p>.<p>ಜಾಥಾ ಈಗ ತೀವ್ರತೆ ಕಳೆದುಕೊಂಡಿದೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಏಕೈಕ ಉದ್ದೇಶದಿಂದ ಪಾದಯಾತ್ರೆ ನಡೆಸುತ್ತಿದ್ದಾರೆ. ಇಂಥ ಮೋಸದ ಯಾತ್ರೆಗಳು ಫಲ ನೀಡುವುದಿಲ್ಲ. ಕಾನೂನು ಬಲ್ಲವರಿಂದಲೇ ಕಾನೂನು ಉಲ್ಲಂಘನೆ ಆಗುತ್ತಿರುವುದು ವಿಷಾದನೀಯ ಎಂದರು.</p>.<p>ಈ ಯೋಜನೆ ಕುರಿತು ಚೆನ್ನೈನ ಹಸಿರುಪೀಠದಲ್ಲಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ. ಆದರೆ ತಮಿಳುನಾಡು ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬಾಕಿ ಇದೆ. ಇದರ ವಿಲೇವಾರಿ ಆಗದೇ ಯೋಜನೆ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಈ ರೀತಿ ಇರುವಾಗ ಪಾದಯಾತ್ರೆ ಎಷ್ಟರ ಮಟ್ಟಿಗೆ ಸರಿ. ಸಂವಿಧಾನ ಓದಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಮ್ಮ ಬೆನ್ನು ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದರು.</p>.<p>ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೃತಿ ಮಾತನಾಡಿ, ಕೋವಿಡ್ನ ಎರಡು ಅಲೆಗಳಿಂದ ಜನರು ಸಂಷಕ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಲಾಕ್ಡೌನ್ ಯಾರಿಗೂ ಬೇಕಾಗಿಲ್ಲ. ಈ ಸಂದರ್ಭದಲ್ಲಿ ಪಾದಯಾತ್ರೆ ಸರಿಯಲ್ಲ. ಮೇಕೆದಾಟು ಯೋಜನೆಗೆ ಯಾವ ಕನ್ನಡಿಗನ ವಿರೋಧವೂ ಇಲ್ಲ. ಆದರೆ ಜಾಥಾ ಹೆಸರಿನಲ್ಲಿ ದಾರಿ ತಪ್ಪಿಸುವ ಪ್ರವೃತ್ತಿ ಸಲ್ಲದು ಎಂದು ಹೇಳಿದರು.</p>.<p>‘ಕಾವೇರಿ ನಮ್ಮ ತಾಯಿ. ಕಾವೇರಿ ವಿಚಾರ, ನಾಡಿನ ವಿಚಾರ ಬಂದಾಗ ಎಲ್ಲರೂ ಜತೆಗೂಡಬೇಕು. ಪಕ್ಷ ಕಟ್ಟುವ ಕೆಲಸಕ್ಕಾಗಿ ಇದನ್ನು ಬಳಸಿಕೊಳ್ಳಬಾರದು. ಅಮಾಯಕರ ಜೀವವನ್ನು ಬಲಿ ಕೊಡಬಾರದು’ ಎಂದರು.</p>.<p><strong>ಇದನ್ನೂ ಓದಿ... <a href="https://www.prajavani.net/district/bengaluru-city/education-department-extends-holiday-for-schools-in-bengaluru-due-to-covid-cases-increasing-901305.html" target="_blank">ಬೆಂಗಳೂರಿನಲ್ಲಿ ಜ.31 ರವರೆಗೆ ಶಾಲೆಗಳಿಗೆ ರಜೆ ವಿಸ್ತರಣೆ: ಸಚಿವ ಬಿ.ಸಿ. ನಾಗೇಶ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>