ಹಿಂದಿ ಭಾಷೆಯ ಬಗೆಗಿನ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ರಾಜ್ಯದ ಜನತೆಯ ಕ್ಷಮೆ ಯಾಚಿಸಿರುವ ಅವರು, ' ನಾನೇನು ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿ ಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ ' ಎಂದು ಸ್ಪಷ್ಟನೆ ನೀಡಿದ್ದಾರೆ.