<p><strong>ರಾಮನಗರ</strong>: 'ಸಿದ್ದರಾಮಯ್ಯ ಅವರೇ ನಿಜವಾದ ಪಪ್ಪಿ' ಎಂದು ಅಶ್ವತ್ಥನಾರಾಯಣ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಲೇವಡಿ ಮಾಡಿದರು.</p>.<p>ಇಲ್ಲಿನ ಕೆಂಪೇಗೌಡನದೊಡ್ಡಿ ಬಳಿ ಹೆದ್ದಾರಿ ಕಾಮಗಾರಿ ಪರಿಶೀಲನೆ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದರು.</p>.<p>ಆತ್ಮಸಾಕ್ಷಿ ಇರುವ ಯಾರೇ ಆದರೂ ಒಂದು ಕ್ಷಣ ಕಾಂಗ್ರೆಸ್ ನಲ್ಲಿ ಇರುವುದಿಲ್ಲ. ವಂಶಪಾರಂಪರ್ಯ ರಾಜಕಾರಣ ಇರುವ ಪಕ್ಷ ಕಾಂಗ್ರೆಸ್. ಇವರಿಗೆ ಆತ್ಮಸಾಕ್ಷಿ ಇದ್ದರೆ ಕೂಡಲೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಬೇಕು ಎಂದರು.</p>.<p>ಸಚಿವ ಕೆ. ಗೋಪಾಲಯ್ಯ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ಅವರು ರಾಜಕೀಯ ನಿವೃತ್ತಿ ಪಡೆಯುವುದು ಒಳಿತು ಎಂದು ಸಲಹೆ ನೀಡಿದರು.</p>.<p>ಬೆಂಗಳೂರು- ಮೈಸೂರು ನೂತನ ಹೆದ್ದಾರಿಯಲ್ಲಿ ಆರು ಪ್ರಮುಖ ನಗರಗಳಿಗೆ ಪ್ರವೇಶ ಮತ್ತು ನಿರ್ಗಮನ ಟೋಲ್ ಗಳನ್ನು ನಿರ್ಮಿಸುವ ವ್ಯವಸ್ಥೆ ಸದ್ಯದಲ್ಲೇ ಆಗಲಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಬೆಂಗಳೂರಿನಿಂದ ಬಂಟಾಳ್ವವರೆಗೆ ಒಟ್ಟು 370 ಕಿ.ಮೀ.ಗೂ ಹೆಚ್ಚು ಉದ್ಧದ ಹೆದ್ದಾರಿಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು. ಮಂಗಳೂರು ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಈ ರಸ್ತೆ ಬೆಳೆಯಲಿದೆ ಎಂದರು.</p>.<p>ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ನಮ್ಮ ಸಹಮತ ಇದೆ. ಕಾವೇರಿ ಹೆಸರಿಟ್ಟರೂ ಸರಿಯೇ. ಎರಡೂ ನಮ್ಮ ಕಣ್ಣಿದಂತೆ ಎಂದರು.</p>.<p>ವಿಧಾನಸೌಧದಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ತನಿಖೆ ಆಗಲಿದೆ ಎಂದರು.</p>.<p>ಸ್ಯಾಂಟ್ರೊ ರವಿ ಜೊತೆ ಬಿಜೆಪಿ ಸಂಪರ್ಕದ ಕುರಿತು ಪ್ರತಿಕ್ರಿಯೆಗೆ ಅವರು ನಿರಾಕರಿಸಿದರು.</p>.<p><a href="https://www.prajavani.net/entertainment/cinema/sonu-sood-slammed-by-northern-railway-for-travelling-on-footboard-of-train-1003336.html" itemprop="url">ನಟ ಸೋನು ಸೂದ್ಗೆ ಬುದ್ದಿವಾದ ಹೇಳಿದ ಉತ್ತರ ರೈಲ್ವೆ ವಲಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: 'ಸಿದ್ದರಾಮಯ್ಯ ಅವರೇ ನಿಜವಾದ ಪಪ್ಪಿ' ಎಂದು ಅಶ್ವತ್ಥನಾರಾಯಣ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಲೇವಡಿ ಮಾಡಿದರು.</p>.<p>ಇಲ್ಲಿನ ಕೆಂಪೇಗೌಡನದೊಡ್ಡಿ ಬಳಿ ಹೆದ್ದಾರಿ ಕಾಮಗಾರಿ ಪರಿಶೀಲನೆ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದರು.</p>.<p>ಆತ್ಮಸಾಕ್ಷಿ ಇರುವ ಯಾರೇ ಆದರೂ ಒಂದು ಕ್ಷಣ ಕಾಂಗ್ರೆಸ್ ನಲ್ಲಿ ಇರುವುದಿಲ್ಲ. ವಂಶಪಾರಂಪರ್ಯ ರಾಜಕಾರಣ ಇರುವ ಪಕ್ಷ ಕಾಂಗ್ರೆಸ್. ಇವರಿಗೆ ಆತ್ಮಸಾಕ್ಷಿ ಇದ್ದರೆ ಕೂಡಲೇ ಕಾಂಗ್ರೆಸ್ ಗೆ ರಾಜೀನಾಮೆ ನೀಡಬೇಕು ಎಂದರು.</p>.<p>ಸಚಿವ ಕೆ. ಗೋಪಾಲಯ್ಯ ಮಾತನಾಡಿ, ಸಿದ್ದರಾಮಯ್ಯ ಅವರಿಗೆ ಬುದ್ಧಿ ಭ್ರಮಣೆ ಆಗಿದೆ. ಅವರು ರಾಜಕೀಯ ನಿವೃತ್ತಿ ಪಡೆಯುವುದು ಒಳಿತು ಎಂದು ಸಲಹೆ ನೀಡಿದರು.</p>.<p>ಬೆಂಗಳೂರು- ಮೈಸೂರು ನೂತನ ಹೆದ್ದಾರಿಯಲ್ಲಿ ಆರು ಪ್ರಮುಖ ನಗರಗಳಿಗೆ ಪ್ರವೇಶ ಮತ್ತು ನಿರ್ಗಮನ ಟೋಲ್ ಗಳನ್ನು ನಿರ್ಮಿಸುವ ವ್ಯವಸ್ಥೆ ಸದ್ಯದಲ್ಲೇ ಆಗಲಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.</p>.<p>ಬೆಂಗಳೂರಿನಿಂದ ಬಂಟಾಳ್ವವರೆಗೆ ಒಟ್ಟು 370 ಕಿ.ಮೀ.ಗೂ ಹೆಚ್ಚು ಉದ್ಧದ ಹೆದ್ದಾರಿಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಲಾಗುವುದು. ಮಂಗಳೂರು ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಈ ರಸ್ತೆ ಬೆಳೆಯಲಿದೆ ಎಂದರು.</p>.<p>ಹೆದ್ದಾರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ನಮ್ಮ ಸಹಮತ ಇದೆ. ಕಾವೇರಿ ಹೆಸರಿಟ್ಟರೂ ಸರಿಯೇ. ಎರಡೂ ನಮ್ಮ ಕಣ್ಣಿದಂತೆ ಎಂದರು.</p>.<p>ವಿಧಾನಸೌಧದಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ತನಿಖೆ ಆಗಲಿದೆ ಎಂದರು.</p>.<p>ಸ್ಯಾಂಟ್ರೊ ರವಿ ಜೊತೆ ಬಿಜೆಪಿ ಸಂಪರ್ಕದ ಕುರಿತು ಪ್ರತಿಕ್ರಿಯೆಗೆ ಅವರು ನಿರಾಕರಿಸಿದರು.</p>.<p><a href="https://www.prajavani.net/entertainment/cinema/sonu-sood-slammed-by-northern-railway-for-travelling-on-footboard-of-train-1003336.html" itemprop="url">ನಟ ಸೋನು ಸೂದ್ಗೆ ಬುದ್ದಿವಾದ ಹೇಳಿದ ಉತ್ತರ ರೈಲ್ವೆ ವಲಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>