ಉಡುಪಿ: ರಸ್ತೆ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯಮಂತ್ರಿಗೆ ಶುಭ ಕೋರುವಂತಹ ಹೋರ್ಡಿಂಗ್ಗಳನ್ನು ಹಾಕಬಾರದು ಎಂದು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.
ಮುಖ್ಯಮಂತ್ರಿಯು ನಾಡಿನ ಸೇವಕ ಎಂಬ ಭಾವನೆಗೆ ಧಕ್ಕೆಯಾಗಬಾರದು ಎಂಬುದು ಇದರ ಉದ್ದೇಶ ಎಂದು ಅವರು ತಿಳಿಸಿದರು.