‘ಈ ಜಾಗವನ್ನು ಮಂಜೂರು ಮಾಡುವಂತೆ 2012ರಲ್ಲಿ ಸಂಸ್ಥೆಯು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. 2013ರಲ್ಲಿ ಮಂತ್ರಿಮಂಡಲದಲ್ಲಿ ಇದನ್ನು ಪರಿಗಣಿಸಿ ಈ ಶಾಲೆ ಕಟ್ಟಡ ಮತ್ತು ಜಾಗ ಹಾಗೂ ಟಿಆರ್ಸಿ ಕಟ್ಟಡದ 36,591 ಚದರಡಿ ವಿಸ್ತೀರ್ಣವನ್ನು ರಾಮಕೃಷ್ಣ ಆಶ್ರಮಕ್ಕೆ ನೀಡಲು ತೀರ್ಮಾನಿಸಲಾಗಿತ್ತು. 2020ರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈಸೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆ ಉಳಿಸುವಂತೆ ಹೋರಾಟ ಮಾಡುತ್ತಿದ್ದವರನ್ನು ಭೇಟಿ ಮಾಡಿ, ಹೊಸ ಮಾದರಿ ಶಾಲೆಯನ್ನು ಹಾಗೇ ಉಳಿಸುವ ಭರವಸೆ ನೀಡಿದರು. ಆದರೆ ಪಕ್ಕದಲ್ಲಿದ್ದ ಜಾಗವನ್ನು ಮಠಕ್ಕೆ ನೀಡಲು ಅನುಕೂಲವಾಗುವಂತೆ ಪ್ರಸ್ತಾವನೆ ಸಲ್ಲಿಸಿಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದರು. ಆದರೆ ಇಂತ ಐತಿಹಾಸಿಕ ಜಾಗವನ್ನು ಯಾವುದೇ ಕಾರಣಕ್ಕೂ ಬೇರೆ ಸಂಸ್ಥಗಳಿಗೆ ಪರಭಾರೆ ಮಾಡಬಾರದು. ಜತೆಗೆ ಅಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೂ ಅವಕಾಶ ನೀಡಬಾರದು’ ಎಂದು ಹಿರೇಮಠ ಒತ್ತಾಯಿಸಿದರು.