ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಶಿ ಕೊಡುಗೆ ಸ್ಮರಿಸಿದ ದೊರೆಸ್ವಾಮಿ

ಧಾರವಾಡ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ 2ಸಾವಿರ ಡೆಸ್ಕ್‌
Last Updated 25 ಜನವರಿ 2021, 16:46 IST
ಅಕ್ಷರ ಗಾತ್ರ

ಧಾರವಾಡ: ‘ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ 2 ಸಾವಿರ ಡೆಸ್ಕ್‌ ಗಳನ್ನು ನೀಡಿರುವುದು ಉಪಯುಕ್ತ’ ಎಂದು ಶಿಕ್ಷಣ ಸುಧಾ ರಣೆಗಳ ಸಲಹೆಗಾರ ಪ್ರೊ. ಎಂ.ಆರ್.ದೊರೆಸ್ವಾಮಿ ಅಭಿ ಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ರಾಜ್ಯ ಸರ್ಕಾರವು ಈಚೆಗೆ ಜಾರಿಗೆ ತಂದ ದತ್ತು ಯೋಜನೆಯಿಂದಾಗಿ, ಸರ್ಕಾರಿ ಶಾಲೆಗಳ ಸುಧಾರಣೆಗೆ ಅನುಕೂಲವಾಗಿದೆ. ಈ ಯೋಜನೆಯು ಶಿಕ್ಷಣ ಸುಧಾರಣೆಯಲ್ಲಿ ಗಮನಾರ್ಹ ಪರಿಣಾಮ ಬೀರಿದೆ. ರಾಜ್ಯದ 48 ಸಾವಿರಕ್ಕೂ ಅಧಿಕ ಶಾಲೆಗಳಿಗೆ ಇಂಥ ಮೂಲಸೌಕರ್ಯಗಳ ಅಗತ್ಯವಿದೆ’ ಎಂದಿದ್ದಾರೆ.

‘ಪ್ರತಿಯೊಬ್ಬ ಜನಪ್ರತಿನಿಧಿ 10 ಶಾಲೆ ಗಳನ್ನು ದತ್ತು ಪಡೆದಿದ್ದಾರೆ. ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಪರಿಹಾರ ಯೋಜನೆ ಮೂಲಕ ಗ್ರಾಮೀಣಾಭಿವೃದ್ಧಿ ಇಲಾಖೆಗೆ ನೆರವಾಗಲಿದ್ದಾರೆ. ಜೋಶಿ ಅವರು ಶಾಲೆಗಳಿಗೆ ಡೆಸ್ಕ್ ಕೊಡಿಸುವುದರ ಜತೆಯಲ್ಲೇ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿಯೂ ಸರ್ಕಾರಿ ಶಾಲಾಭಿವೃದ್ಧಿಗೆ ಕೊಡುಗೆ ನೀಡಿ ದ್ದಾರೆ’ ಎಂದು ಅವರು ಸ್ಮರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT