ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ರಾಜ್ಯ ಸರ್ಕಾರವು ಈಚೆಗೆ ಜಾರಿಗೆ ತಂದ ದತ್ತು ಯೋಜನೆಯಿಂದಾಗಿ, ಸರ್ಕಾರಿ ಶಾಲೆಗಳ ಸುಧಾರಣೆಗೆ ಅನುಕೂಲವಾಗಿದೆ. ಈ ಯೋಜನೆಯು ಶಿಕ್ಷಣ ಸುಧಾರಣೆಯಲ್ಲಿ ಗಮನಾರ್ಹ ಪರಿಣಾಮ ಬೀರಿದೆ. ರಾಜ್ಯದ 48 ಸಾವಿರಕ್ಕೂ ಅಧಿಕ ಶಾಲೆಗಳಿಗೆ ಇಂಥ ಮೂಲಸೌಕರ್ಯಗಳ ಅಗತ್ಯವಿದೆ’ ಎಂದಿದ್ದಾರೆ.