ಶುಕ್ರವಾರ, ಮಾರ್ಚ್ 24, 2023
30 °C

‘ಕಾನೂನು ಹೋರಾಟ ಬಳಿಕವೇ ಡಿಪಿಆರ್‌ಗೆ ಅನುಮತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ‘ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಚನೆಯಾದ ನ್ಯಾಯಾಧೀಕರಣದ ತೀರ್ಪಿನ ಮೇರೆಗೆ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಕೇಂದ್ರ ಸರ್ಕಾರ ಮಹದಾಯಿ ಯೋಜನೆಯ ಡಿಪಿಆರ್‌ಗೆ ಅನುಮತಿ ನೀಡಿದೆ. ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಅನೇಕ ವರ್ಷಗಳಿಂದ ಕಾನೂನು ಹೋರಾಟ ನಡೆಸಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಅನುಮತಿ ನೀಡಿದರೆ ಕಾನೂನು‌ ಹೋರಾಟ ನಡೆಸುತ್ತೇವೆ’ ಎನ್ನುವ ಗೋವಾ ಸಚಿವರ ಹೇಳಿಕೆಗೆ ಮಂಗಳವಾರ ನಗರದ ವಿಮಾನ ನಿಲ್ದಾಣದಲ್ಲಿ ಅವರು ಪ್ರತಿಕ್ರಿಯಿಸಿದರು.

‘ನ್ಯಾಯಾಧೀಕರಣದ ತೀರ್ಪಿನ ಅನುಷ್ಠಾನದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ 2017ರಲ್ಲಿಯೇ ಪ್ರಕಟಿಸಿತ್ತು. ಇದೀಗ ಡಿಪಿಆರ್‌ಗೆ ಅನುಮೋದನೆ ದೊರೆತಿದ್ದು, ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳಿಸಲಾಗುವುದು’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು