ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಂತ ವೈದ್ಯ ಪ್ರದೀಪ್‌ಗೆ ರಾಜ್ಯೋತ್ಸವ ಗೌರವ

Last Updated 31 ಅಕ್ಟೋಬರ್ 2021, 22:00 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಖ್ಯಾತ ದಂತ ವೈದ್ಯ ಡಾ.ಎ.ಆರ್.ಪ್ರದೀಪ್ ಅವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿರುವ ಇವರು ಗೌರವ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇವರ ಸೇವಾ ಮನೋಭಾವವನ್ನು ಗುರುತಿಸಿದ್ದ ರಾಜ್ಯ ಸರ್ಕಾರ ಡಾ.ಬಿ.ಸಿ.ರಾಯ್ ಪ್ರಶಸ್ತಿ ನೀಡಿ ಗೌರವಿಸಿತ್ತು. ಅಮೆರಿಕನ್ ಕಾಲೇಜ್ ಆಫ್‌ ಕಾರ್ಡಿಯಾಲಜಿಯಿಂದ ಹಾಗೂ ಇಂಡಿಯನ್ ಕಾಲೇಜ್ ಆಫ್‌ ಕಾರ್ಡಿಯಾಲಜಿಯಿಂದ ಫೆಲೋಷಿಪ್ ಕೂಡ ಪಡೆದಿದ್ದಾರೆ.

ಹಲವಾರು ಅಂತಾರಾಷ್ಟ್ರೀಯ ವಿಚಾರಸಂಕಿರಣಗಳಲ್ಲಿ ವಿಚಾರ ಮಂಡನೆ ಮಾಡಿರುವ ಡಾ.ಪ್ರದೀಪ್‌ ಹೃದ್ರೋಗದ ಕುರಿತು ಹಲವಾರು ಲೇಖನಗಳನ್ನು ರಚಿಸಿದ್ದಾರೆ. ಸುಮಾರು 60ಕ್ಕೂ ಹೆಚ್ಚು ಸಂಶೋಧನಾ ಲೇಖನಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟೀಯ ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT