ಬೆಳಗಾವಿ: ‘ಮಾದಕವಸ್ತು ಪ್ರಕರಣದಲ್ಲಿ ಯಾರನ್ನೂ ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚಲನಚಿತ್ರ ನಟಿ ಅನುಶ್ರೀ ಇರಲಿ, ಯಾರೇ ಆಗಿರಲಿ ಅವರ ವಿಷಯದಲ್ಲಿ ರಾಜಕೀಯ ಒತ್ತಡವೇನಿಲ್ಲ. ಮಾದಕವಸ್ತು ಪ್ರಕರಣ ಇದಾಗಿರುವುದರಿಂದ ಯಾರೂ ಒತ್ತಡ ಹಾಕುವುದಿಲ್ಲ. ಇಂತಹ ಪ್ರಕರಣದಲ್ಲಿ ನಮ್ಮ ಸರ್ಕಾರವು ಬಹಳಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಅಪರಾಧಿ ಎನಿಸಿದವರು ಶಿಕ್ಷೆಗೆ ಗುರಿಯಾಗುವುದು ಖಚಿತ. ಎಷ್ಟೇ ಪ್ರಭಾವಿಗಳಾಗಿದ್ದರೂ ಖಂಡಿತವಾಗಿಯೂ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.
‘ಪೊಲೀಸರ ಮೇಲೆ ಒತ್ತಡವಿದೆ ಎನ್ನುವುದು ಊಹಾಪೋಹ. ಯಾರ ಒತ್ತಡಕ್ಕೂ ನಮ್ಮ ಪೊಲೀಸರು ಬಗ್ಗುವುದಿಲ್ಲ’ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.