‘ಕೊರೊನಾ ಎರಡನೇ ಅಲೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೋವಿಡ್ ಪ್ರಕರಣಗಳೂ ಏರುಗತಿಯಲ್ಲಿ ಸಾಗಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ‘ರೆಮ್ಡಿಸಿವಿರ್’ ಚುಚ್ಚುಮದ್ದು ಹಾಗೂ ವೈದ್ಯಕೀಯ ಆಮ್ಲಜನಕದ ಅವಶ್ಯಕತೆ ಹೆಚ್ಚಿದೆ. ಇವುಗಳನ್ನು ಸಕಾಲದಲ್ಲಿ ಒದಗಿಸುವ ಮೂಲಕ ಕೋವಿಡ್ ರೋಗಿಗಳ ಚಿಕಿತ್ಸೆಗೆ ನೆರವಾಗಬೇಕಿದೆ. ಈ ಉದ್ದೇಶದಿಂದ ಇಲಾಖೆಯ ಕೇಂದ್ರ ಕಚೇರಿಯಲ್ಲಿ ‘ವಾರ್ ರೂಂ’ ಆರಂಭಿಸಲಾಗಿದೆ. ಇಲಾಖೆಯ ಅಧಿಕಾರಿ ಹಾಗೂ ನೌಕರರನ್ನು ಮೂರು ತಂಡಗಳನ್ನಾಗಿ ವಿಭಾಗಿಸಲಾಗಿದೆ. ಇವರು ಪಾಳಿ ಮಾದರಿಯಲ್ಲಿ ಕೆಲಸ ಮಾಡಲಿದ್ದಾರೆ’ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.