<p><strong>ಬೆಂಗಳೂರು</strong>: ಡ್ರಗ್ಸ್ ಜಾಲದ ಬಂಧಿತ ಆರೋಪಿ ಅನೂಪ್ನೊಂದಿಗೆ ಹಣಕಾಸು ವ್ಯವಹಾರ ನಡೆಸಿರುವ ಆರೋಪದಡಿ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೇಶ್ ಕೊಡಿಯೇರಿಯನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬೆಂಗಳೂರಿನಲ್ಲಿ ಗುರುವಾರ ವಶಕ್ಕೆ ಪಡೆದಿದ್ದಾರೆ.</p>.<p>ಡ್ರಗ್ಸ್ ಪ್ರಕರಣದಲ್ಲಿ ಎನ್ಸಿಬಿ ಅಧಿಕಾರಿಗಳು ಬಂಧಿಸಿರುವ ಡ್ರಗ್ ಪೆಡ್ಲರ್ ಮೊಹಮ್ಮದ್ ಅನೂಪ್ನೊಂದಿಗೆ ಬಿನೇಶ್ ನಂಟು ಹೊಂದಿದ್ದರು. ಬೆಂಗಳೂರಿನಲ್ಲಿ ರೆಸ್ಟೋರೆಂಟ್ವೊಂದನ್ನು ತೆರೆಯಲು ಅನೂಪ್ಗೆ ಬಿನೇಶ್ ಹಣಕಾಸಿನ ನೆರವು ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಕುರಿತು ಅ.6ರಂದು ವಿಚಾರಣೆಗೆ ಬರುವಂತೆ ಇಡಿ ಬಿನೇಶ್ಗೆ ನೋಟಿಸ್ ನೀಡಿತ್ತು.</p>.<p>ವಿಚಾರಣೆ ಎದುರಿಸಿದ ಬಿನೇಶ್, ಅನೂಪ್ಗೆ ಸ್ನೇಹಿತರಿಂದ ಹಣ ಕೊಡಿಸಿರುವುದಾಗಿ ತನಿಖಾಧಿಕಾರಿಗಳಿಗೆ ತಿಳಿಸಿದ್ದರು. ಇದಕ್ಕೆ ಸೂಕ್ತ ದಾಖಲೆ ಸಲ್ಲಿಸುವಂತೆ ಇಡಿ ಸೂಚಿಸಿತ್ತು. ಈ ಸಂಬಂಧ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ಬಿನೇಶ್ ಎರಡನೇ ಬಾರಿಯ ವಿಚಾರಣೆಗೆ ಗುರುವಾರ ಹಾಜರಾದರು. ಬಿನೇಶ್ ತಂದಿದ್ದ ದಾಖಲೆಗಳೊಂದಿಗೆ ಸತತ ನಾಲ್ಕು ಗಂಟೆಗಳ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಡ್ರಗ್ಸ್ ಜಾಲದ ಬಂಧಿತ ಆರೋಪಿ ಅನೂಪ್ನೊಂದಿಗೆ ಹಣಕಾಸು ವ್ಯವಹಾರ ನಡೆಸಿರುವ ಆರೋಪದಡಿ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೇಶ್ ಕೊಡಿಯೇರಿಯನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬೆಂಗಳೂರಿನಲ್ಲಿ ಗುರುವಾರ ವಶಕ್ಕೆ ಪಡೆದಿದ್ದಾರೆ.</p>.<p>ಡ್ರಗ್ಸ್ ಪ್ರಕರಣದಲ್ಲಿ ಎನ್ಸಿಬಿ ಅಧಿಕಾರಿಗಳು ಬಂಧಿಸಿರುವ ಡ್ರಗ್ ಪೆಡ್ಲರ್ ಮೊಹಮ್ಮದ್ ಅನೂಪ್ನೊಂದಿಗೆ ಬಿನೇಶ್ ನಂಟು ಹೊಂದಿದ್ದರು. ಬೆಂಗಳೂರಿನಲ್ಲಿ ರೆಸ್ಟೋರೆಂಟ್ವೊಂದನ್ನು ತೆರೆಯಲು ಅನೂಪ್ಗೆ ಬಿನೇಶ್ ಹಣಕಾಸಿನ ನೆರವು ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಕುರಿತು ಅ.6ರಂದು ವಿಚಾರಣೆಗೆ ಬರುವಂತೆ ಇಡಿ ಬಿನೇಶ್ಗೆ ನೋಟಿಸ್ ನೀಡಿತ್ತು.</p>.<p>ವಿಚಾರಣೆ ಎದುರಿಸಿದ ಬಿನೇಶ್, ಅನೂಪ್ಗೆ ಸ್ನೇಹಿತರಿಂದ ಹಣ ಕೊಡಿಸಿರುವುದಾಗಿ ತನಿಖಾಧಿಕಾರಿಗಳಿಗೆ ತಿಳಿಸಿದ್ದರು. ಇದಕ್ಕೆ ಸೂಕ್ತ ದಾಖಲೆ ಸಲ್ಲಿಸುವಂತೆ ಇಡಿ ಸೂಚಿಸಿತ್ತು. ಈ ಸಂಬಂಧ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ಬಿನೇಶ್ ಎರಡನೇ ಬಾರಿಯ ವಿಚಾರಣೆಗೆ ಗುರುವಾರ ಹಾಜರಾದರು. ಬಿನೇಶ್ ತಂದಿದ್ದ ದಾಖಲೆಗಳೊಂದಿಗೆ ಸತತ ನಾಲ್ಕು ಗಂಟೆಗಳ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>