ಸಂಜನಾ ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಹೊಸದಾಗಿ ಅರ್ಜಿ ಸಲ್ಲಿಸಿದ ಸಂಜನಾ, ವೈದ್ಯಕೀಯ ಕಾರಣಗಳನ್ನು ನೀಡಿದ್ದರು. ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ವಾಣಿ ವಿಲಾಸ ಆಸ್ಪತ್ರೆಗೆ ಹೈಕೋರ್ಟ್ ಪೀಠ ಸೂಚನೆ ನೀಡಿತ್ತು. ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂಬ ವರದಿ ಆಧರಿಸಿ ಜಾಮೀನು ಮಂಜೂರು ಮಾಡಿದೆ.₹3 ಲಕ್ಷ ಮೌಲ್ಯದ ಭದ್ರತಾ ಠೇವಣಿ ಮತ್ತು ಇಬ್ಬರ ಜಾಮೀನು ಪಡೆದು ಸಂಜನಾ ಬಿಡುಗಡೆ ಮಾಡುವಂತೆ ಕಾರಾಗೃಹದ ಅಧಿಕಾರಿಗಳಿಗೆ ನ್ಯಾಯ ಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಆದೇಶಿಸಿದರು.