ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್: ಉದ್ಯಮಿ ಆದಿ ಶ್ರೀನಿವಾಸ್ ನಾಯ್ಡು ಬಂಧನ

ಕೊಕೇನ್ ಖರೀದಿಸುವಾಗಲೇ ಎನ್‌ಸಿಬಿ ದಾಳಿ
Last Updated 27 ಮೇ 2022, 19:50 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಉದ್ಯಮಿ ಆದಿ ಶ್ರೀನಿವಾಸ್ ನಾಯ್ಡು ಅವರನ್ನು ಎನ್‌ಸಿಬಿ (ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ) ಅಧಿಕಾರಿಗಳು ದೇವನಹಳ್ಳಿ ಸಮೀಪದ ಸಾದಹಳ್ಳಿ ಗೇಟ್ ಬಳಿ ಇತ್ತೀಚೆಗೆ ಬಂಧಿಸಿದ್ದಾರೆ.

ಬಂಧಿತ ಶ್ರೀನಿವಾಸ್, ಆಂಧ್ರಪ್ರದೇಶ ಟಿಡಿಪಿ ಮುಖಂಡರೂ ಆಗಿದ್ದ ಉದ್ಯಮಿ ದಿವಂಗತ ಡಿ.ಕೆ.ಆದಿಕೇಶವಲು ನಾಯ್ಡು ಅವರ ಮಗ. ಡ್ರಗ್ಸ್ ಖರೀದಿಸುವಾಗಲೇ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

‘ನಗರದ ಹಲವು ಆಸ್ಪತ್ರೆಗಳ ಪಾಲುದಾರರು ಹಾಗೂ ಉದ್ಯಮಿ ಆಗಿರುವ ಶ್ರೀನಿವಾಸ್, ಕೆಲವರಿಂದ ಡ್ರಗ್ಸ್ ಖರೀದಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಲು ವಿಶೇಷ ತಂಡ ರಚಿಸಲಾಗಿತ್ತು’ ಎಂದು ಎನ್‌ಸಿಬಿ ಮೂಲಗಳು ಹೇಳಿವೆ.

‘ಹೈದರಾಬಾದ್‌ಗೆ ಇತ್ತೀಚೆಗೆ ಹೋಗಿದ್ದ ಶ್ರೀನಿವಾಸ್, ಕಾರಿನಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದರು. ಸಾದಹಳ್ಳಿ ಗೇಟ್ ಬಳಿ ಕೆಲ ನಿಮಿಷ ಕಾರು ನಿಲ್ಲಿಸಿದ್ದರು. ಅದೇ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ, ಶ್ರೀನಿವಾಸ್ ಕೈಗೆ ಕೊಕೇನ್ ಡ್ರಗ್ಸ್ ಇದ್ದ ಪೊಟ್ಟಣ ನೀಡಿದ್ದ.’

‘ಸಮೀಪದಲ್ಲೇ ಇದ್ದ ವಿಶೇಷ ತಂಡದ ಸಿಬ್ಬಂದಿ, ಕಾರಿನ ಬಳಿ ಹೋಗಿ ಸುತ್ತುವರೆದಿದ್ದರು. ಶ್ರೀನಿವಾಸ್ ಅವರನ್ನು ವಶಕ್ಕೆ ಪಡೆದು ಪೊಟ್ಟಣ ಪರಿಶೀಲಿಸಿದ್ದರು. ಪೊಟ್ಟಣದಲ್ಲಿ ಕೊಕೇನ್ ಇತ್ತು. ಅದನ್ನು ಜಪ್ತಿ ಮಾಡಿ, ಶ್ರೀನಿವಾಸ್ ಅವರನ್ನು ಬಂಧಿಸಲಾಯಿತು’ ಎಂದೂ ಮೂಲಗಳು ತಿಳಿಸಿವೆ.

‘ಶ್ರೀನಿವಾಸ್ ಅವರು ಡ್ರಗ್ಸ್ ವ್ಯಸನಿ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಪೆಡ್ಲರ್ ಜೊತೆ ಸಂಪರ್ಕವಿಟ್ಟುಕೊಂಡಿದ್ದ ಅವರು, ಡ್ರಗ್ಸ್ ತರಿಸಿಕೊಂಡು ಸೇವಿಸುತ್ತಿದ್ದರು. ಇತರರಿಗೆ ಸೇವಿಸುವಂತೆ ಪ್ರಚೋದಿಸುತ್ತಿದ್ದರು’ ಎಂದೂ ಹೇಳಿವೆ.

ಮನೆ ಮೇಲೂ ದಾಳಿ: ‘ಸದಾಶಿವನಗರದಲ್ಲಿರುವ ಶ್ರೀನಿವಾಸ್ ಅವರ ಮನೆ ಮೇಲೂ ದಾಳಿ ಮಾಡಲಾಗಿತ್ತು. ಆದರೆ, ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT