ಚಿಕ್ಕಬಳ್ಳಾಪುರ: ಆರ್ಎಸ್ಎಸ್ ಅನ್ನು ತಾಲಿಬಾನ್ಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ತಲೆಕೆಟ್ಟಿದೆ. ರಾಜಕಾರಣದಲ್ಲಿ ಸ್ವಲ್ಪ ತಲೆಕೆಟ್ಟರೆ ಪರವಾಗಿಲ್ಲ. ಆದರೆ ಪೂರ್ಣ ತಲೆಕೆಟ್ಟಿರಬಾರದು ಎಂದು ಸಂಸದ ಡಿ.ವಿ.ಸದಾನಂದಗೌಡ ತಿರುಗೇಟು ನೀಡಿದ್ದಾರೆ.
ತಾಲ್ಲೂಕಿನ ಗೊಲ್ಲಹಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲಿಬಾನ್ ಸಂಸ್ಕೃತಿ ಇದ್ದಿದ್ದರೆ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಕಾರಿನಲ್ಲಿ ಓಡಾಡುತ್ತಿದ್ದರಾ? ತಾಲಿಬಾನ್ ಸಂಸ್ಕೃತಿ ಇಲ್ಲಿ ಇದಿದ್ದರೆ ಅವರ ಕಾಲಿಗೆ ಹಗ್ಗಕಟ್ಟಿ ಎಳೆದುಕೊಂಡು ಹೋಗುತ್ತಿದ್ದರು ಎಂದರು.