ಈ ಪ್ರಶಸ್ತಿಯು ₹ 10 ಸಾವಿರ ಹಾಗೂ ಫಲಕವನ್ನು ಒಳಗೊಂಡಿದೆ. ವಿಮರ್ಶಕ ಡಾ.ಓ.ಎಲ್. ನಾಗಭೂಷಣಸ್ವಾಮಿ ಅವರು ಪ್ರಶಸ್ತಿ ಆಯ್ಕೆಗೆ ತೀರ್ಪುಗಾರರಾಗಿದ್ದರು. 26 ವಯೋಮಿತಿ ಒಳಗಿನವರಿಗೆ ಆಯೋಜಿಸಿದ ಕಥಾ ಸ್ಪರ್ಧೆಗೆ ಯೋಗ್ಯವಾದ ಕಥೆಗಳು ಬರದ ಕಾರಣ ಬಹುಮಾನವನ್ನು ನೀಡುತ್ತಿಲ್ಲ. ಇದಕ್ಕೆ ಪರ್ಯಾಯವಾಗಿ ಮುಂದಿನ ದಿನಗಳಲ್ಲಿ ಎರಡು ದಿನಗಳ ಆನ್ಲೈನ್ ಕಥಾ ಕಮ್ಮಟವನ್ನು ಏರ್ಪಡಿಸಲಾಗುತ್ತದೆ. ಈ ವರ್ಷ ಸ್ಪರ್ಧೆಯಲ್ಲಿ ಭಾಗವಹಿಸಿದ ಕಥೆಗಾರರಿಗೆ ಉಚಿತ ಪ್ರವೇಶ ನೀಡುವ ಮೂಲಕ ಅಗತ್ಯ ಮಾರ್ಗದರ್ಶನ ಒದಗಿಸಲಾಗುತ್ತದೆ. ಈ ಮೂಲಕ ಪ್ರೋತ್ಸಾಹಿಸಲಾಗುತ್ತದೆ. ಸಾಹಿತಿ ಚಿದಂಬರ ನರೇಂದ್ರ ಅವರು ಈ ವಿಭಾಗದ ತೀರ್ಪುಗಾರರಾಗಿದ್ದರು ಎಂದು ಈ ಹೊತ್ತಿಗೆಯ ವ್ಯವಸ್ಥಾಪಕ ಟ್ರಸ್ಟಿ ಜಯಲಕ್ಷ್ಮೀ ಪಾಟೀಲ್ ತಿಳಿಸಿದ್ದಾರೆ.