‘ನೌಕರರ ಇತರ ಹಕ್ಕೊತ್ತಾಯಗಳಾದ ತುಟ್ಟಿ ಭತ್ಯೆ ಸ್ಥಗಿತಗೊಳಿಸಿರುವುದನ್ನು ತೆರವುಗೊಳಿಸಿ ಬಾಕಿ ಉಳಿದ ತುಟ್ಟಿ ಭತ್ಯೆ ಬಿಡುಗಡೆಗೊಳಿಸಬೇಕು, ನಿವೃತ್ತಿ ಹೊಂದಿದ ಅಧಿಕಾರಿ, ನೌಕರರ ಮರು ನೇಮಕಾತಿ ನಿಲ್ಲಿಸಬೇಕು, ಹೊರಗುತ್ತಿಗೆ ನೇಮಕಾತಿ ಸ್ಥಗಿತಗೊಳಿಸಬೇಕು ಹಾಗೂ ನೌಕರ ವಿರೋಧಿ ನಡತೆ ನಿಯಮಾವಳಿಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ’ ಎಂದೂ ಹೇಳಿದ್ದಾರೆ.