‘ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮ್ರಿತ್ ಪೌಲ್ ಹಾಗೂ ಡಿವೈಎಸ್ಪಿ ಶಾಂತಕುಮಾರ್, ವಿಭಾಗದ ಸಿಬ್ಬಂದಿ ಮೂಲಕ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಅಭ್ಯರ್ಥಿಗಳ ಒಎಂಆರ್ ಪ್ರತಿ ತಿದ್ದಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರು ಬರುವಂತೆ ನೋಡಿಕೊಂಡಿದ್ದರು’ ಎಂಬುದು ಸಿಐಡಿ ತನಿಖೆಯಿಂದ ಪತ್ತೆಯಾಗಿತ್ತು.