‘ಕೋವಿಡ್ ನಂತರ ಶೈಕ್ಷಣಿಕ ವೇಳಾಪಟ್ಟಿಗಳು ಬದಲಾಗಿವೆ. ಫಲಿತಾಂಶ ತಡವಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಬಿ.ಇಡಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ, ತಿದ್ದುಪಡಿಗೆ ಇನ್ನೊಂದು ಅವಕಾಶ ಕೊಡಬೇಕು ಎಂದು ಕೇಂದ್ರೀಕೃತ ದಾಖಲಾತಿ ಘಟಕಕ್ಕೆ ಪತ್ರ ಬರೆಯಲಾಗಿದೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ್ ಪ್ರತಿಕ್ರಿಯಿಸಿದರು.