ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ವಿತರಿಸಲು ಸೂಚನೆ

Last Updated 9 ಜನವರಿ 2022, 18:21 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಕಾರಣಕ್ಕೆ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ತರಗತಿಗಳು ನಡೆಯದ ಕಾರಣ ಈ ಅವಧಿಯಲ್ಲಿನ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

1 ರಿಂದ 10ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವಂತೆ ಸೂಚಿಸಲಾಗಿದೆ.

ಬಿಸಿಯೂಟದ ಬದಲಿಗೆ ಆಹಾರ ಭದ್ರತಾ ಕಾಯ್ದೆ– 2013 ಮತ್ತು ಮಧ್ಯಾಹ್ನ ಉಪಾಹಾರ ಯೋಜನೆ ನಿಯಮಗಳು– 2015ರ ಅನ್ವಯ ಈ ಕ್ರಮಕೈಗೊಳ್ಳುವಂತೆ
ಸೂಚಿಸಲಾಗಿದೆ.

ಸೆಪ್ಟೆಂಬರ್‌ ತಿಂಗಳಲ್ಲಿ 25 ದಿನಗಳು ಮತ್ತು ಅಕ್ಟೋಬರ್‌ ತಿಂಗಳಲ್ಲಿ 16 ದಿನಗಳ ಆಹಾರ ಧಾನ್ಯಗಳ ವಿತರಿಸಬೇಕು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT