<p><strong>ಬೆಂಗಳೂರು: </strong>ಶಿಕ್ಷಣ ಇಲಾಖೆಯ ಕುಂದು-ಕೊರತೆ, ದೂರುಗಳು, ಸಲಹೆ, ಅಭಿಪ್ರಾಯಗಳನ್ನು ದಾಖಲಿಸಲು ಅನುಕೂಲವಾಗುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆವೆಬ್ ಪೋರ್ಟಲ್ ರೂಪಿಸಿದ್ದು ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ನೂತನ ಪೋರ್ಟಲ್ ಅನಾವರಣಗೊಳಿಸಿದರು.</p>.<p>ಇಲಾಖೆಯ ಕುರಿತು ಅಗತ್ಯ ಮಾಹಿತಿ ಒದಗಿಸುವಶಾಲಾ ಶಿಕ್ಷಣ ಸಚಿವರ ಜಾಲತಾಣ school educationminister.karnataka.gov.in ಪೋರ್ಟಲ್ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಸಹ ಭೇಟಿ ನೀಡಿ, ದೂರು, ಸಲಹೆ , ಅಭಿಪ್ರಾಯ ನೀಡಬಹುದು. ಪೋರ್ಟಲ್ ಮೂಲಕ ಸಲ್ಲಿಕೆಯಾಗುವ ದೂರುಗಳನ್ನು ಶೀಘ್ರ ಪರಿಹರಿಸುವ, ದೂರಿನ ಸ್ಥಿತಿ-ಗತಿಗಳನ್ನು ಆನ್ಲೈನ್ ಮೂಲಕವೇ ಟ್ರ್ಯಾಕ್ ಮಾಡುವ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ.ವೆಬ್ ಪೋರ್ಟಲ್ನಲ್ಲಿ ರಾಜ್ಯದ ಶಾಲೆಗಳ ಸಂಖ್ಯೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಖ್ಯೆ, ಮಧ್ಯಾಹ್ನದ ಬಿಸಿಯೂಟ ಯೋಜನೆ ಸೇರಿದಂತೆ ಎಲ್ಲ ವಿವರ ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p class="Subhead">ಆನ್ಲೈನ್ ಮೂಲಕ ಸೇವಾ ಸೌಲಭ್ಯ: ಶಿಕ್ಷಕರ ಕಲ್ಯಾಣ ನಿಧಿಯ 8 ಸೇವೆಗಳನ್ನು ಆನ್ಲೈನ್ ಮೂಲಕ ಒದಗಿಸುವ ತಂತ್ರಾಂಶ (http://kstbfonline.karnataka.gov.in)ಅಭಿವೃದ್ಧಿಪಡಿಸಲಾಗಿದೆ. ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸದಸ್ಯತ್ವ, ಶಿಕ್ಷಕರು, ವಿದ್ಯಾರ್ಥಿಗಳ ವೈದ್ಯಕೀಯ ಧನಸಹಾಯ, ಶಿಕ್ಷಕರ ಮಕ್ಕಳಿಗೆ ಉನ್ನತ ವ್ಯಾಸಂಗ ಧನ ಸಹಾಯ ಸೇರಿದಂತೆ ಇತರೆ ಸೇವೆಗಳನ್ನು ಪಡೆದುಕೊಳ್ಳಲು ಶಿಕ್ಷಕರು ತಾವು ಕುಳಿತ ಸ್ಥಳದಿಂದಲೇ ಅರ್ಜಿ ಸಲ್ಲಿಸುವ ಮೂಲಕ ಸೇವೆ ಪಡೆದುಕೊಳ್ಳಬಹುದು. ಶಿಕ್ಷಕರು ಈ ಸೇವೆಗಳಿಗಾಗಿ ಬೆಂಗಳೂರಿಗೆ ಅಲೆಯುವುದು ತಪ್ಪಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಶಿಕ್ಷಣ ಇಲಾಖೆಯ ಕುಂದು-ಕೊರತೆ, ದೂರುಗಳು, ಸಲಹೆ, ಅಭಿಪ್ರಾಯಗಳನ್ನು ದಾಖಲಿಸಲು ಅನುಕೂಲವಾಗುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆವೆಬ್ ಪೋರ್ಟಲ್ ರೂಪಿಸಿದ್ದು ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ನೂತನ ಪೋರ್ಟಲ್ ಅನಾವರಣಗೊಳಿಸಿದರು.</p>.<p>ಇಲಾಖೆಯ ಕುರಿತು ಅಗತ್ಯ ಮಾಹಿತಿ ಒದಗಿಸುವಶಾಲಾ ಶಿಕ್ಷಣ ಸಚಿವರ ಜಾಲತಾಣ school educationminister.karnataka.gov.in ಪೋರ್ಟಲ್ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಸಹ ಭೇಟಿ ನೀಡಿ, ದೂರು, ಸಲಹೆ , ಅಭಿಪ್ರಾಯ ನೀಡಬಹುದು. ಪೋರ್ಟಲ್ ಮೂಲಕ ಸಲ್ಲಿಕೆಯಾಗುವ ದೂರುಗಳನ್ನು ಶೀಘ್ರ ಪರಿಹರಿಸುವ, ದೂರಿನ ಸ್ಥಿತಿ-ಗತಿಗಳನ್ನು ಆನ್ಲೈನ್ ಮೂಲಕವೇ ಟ್ರ್ಯಾಕ್ ಮಾಡುವ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದೆ.ವೆಬ್ ಪೋರ್ಟಲ್ನಲ್ಲಿ ರಾಜ್ಯದ ಶಾಲೆಗಳ ಸಂಖ್ಯೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಖ್ಯೆ, ಮಧ್ಯಾಹ್ನದ ಬಿಸಿಯೂಟ ಯೋಜನೆ ಸೇರಿದಂತೆ ಎಲ್ಲ ವಿವರ ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.</p>.<p class="Subhead">ಆನ್ಲೈನ್ ಮೂಲಕ ಸೇವಾ ಸೌಲಭ್ಯ: ಶಿಕ್ಷಕರ ಕಲ್ಯಾಣ ನಿಧಿಯ 8 ಸೇವೆಗಳನ್ನು ಆನ್ಲೈನ್ ಮೂಲಕ ಒದಗಿಸುವ ತಂತ್ರಾಂಶ (http://kstbfonline.karnataka.gov.in)ಅಭಿವೃದ್ಧಿಪಡಿಸಲಾಗಿದೆ. ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸದಸ್ಯತ್ವ, ಶಿಕ್ಷಕರು, ವಿದ್ಯಾರ್ಥಿಗಳ ವೈದ್ಯಕೀಯ ಧನಸಹಾಯ, ಶಿಕ್ಷಕರ ಮಕ್ಕಳಿಗೆ ಉನ್ನತ ವ್ಯಾಸಂಗ ಧನ ಸಹಾಯ ಸೇರಿದಂತೆ ಇತರೆ ಸೇವೆಗಳನ್ನು ಪಡೆದುಕೊಳ್ಳಲು ಶಿಕ್ಷಕರು ತಾವು ಕುಳಿತ ಸ್ಥಳದಿಂದಲೇ ಅರ್ಜಿ ಸಲ್ಲಿಸುವ ಮೂಲಕ ಸೇವೆ ಪಡೆದುಕೊಳ್ಳಬಹುದು. ಶಿಕ್ಷಕರು ಈ ಸೇವೆಗಳಿಗಾಗಿ ಬೆಂಗಳೂರಿಗೆ ಅಲೆಯುವುದು ತಪ್ಪಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>